Jio; ಕೃತಕ ಬುದ್ಧಿಮತ್ತೆ ಫೋನ್ಕಾಲ್ ಸೇವೆ ಘೋಷಣೆ
Team Udayavani, Aug 30, 2024, 6:48 AM IST
ಮುಂಬಯಿ: ಇನ್ನು ಮುಂದೆ, ನೀವು ಯಾರೊಂದಿಗಾದರೂ ಫೋನ್ ಸಂಭಾಷಣೆ ನಡೆಸುವಾಗ ಆ ಕರೆಯನ್ನು ರೆಕಾರ್ಡ್ ಮಾಡುವ, ಲಿಖೀತ ರೂಪದಲ್ಲಿ ಪಡೆಯುವ ಮತ್ತು ಸಂಭಾಷಣೆಯನ್ನು ಮತ್ತೂಂದು ಭಾಷೆಗೆ ಭಾಷಾಂತರಿಸುವ ಸೌಲಭ್ಯವನ್ನು ಪಡೆಯಲಿದ್ದೀರಿ!
ಹೌದು. ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕಂಪೆನಿ ಮುಖ್ಯಸ್ಥ ಮುಕೇಶ್ ಅಂಬಾನಿಯವರು ರಿಲಯನ್ಸ್ ಜಿಯೋ ಗ್ರಾಹಕರಿಗೆ ಇಂಥದ್ದೊಂದು ವಿಶೇಷ ಕೊಡುಗೆ ಘೋಷಿಸಿದ್ದಾರೆ. ರಿಲಯನ್ಸ್ ಜಿಯೋ ಫೋನ್ಕಾಲ್ ಎಐ ಎಂಬ ಹೊಸ ಸೇವೆ ಇದಾಗಿದ್ದು, ಇದರ ಮೂಲಕ ಬಳಕೆದಾರರು ಫೋನ್ ಕರೆ ಸಂಭಾಷಣೆಗಳನ್ನು ರೆಕಾರ್ಡ್, ಲಿಪ್ಯಂತರ ಮತ್ತು ಎಲ್ಲ ಭಾಷೆಗಳಲ್ಲಿ ಅನುವಾದ ಮಾಡಬಹುದು. ಅನಂತರ ಅವುಗಳನ್ನುಕ್ಲೌಡ್ ನಲ್ಲಿ ಸೇವ್ ಮಾಡಿಟ್ಟುಕೊಳ್ಳಬಹುದು.
1:1 ಬೋನಸ್ ಷೇರು
ರಿಲಯನ್ಸ್ ಷೇರುದಾರಿಗೂ ಮುಕೇಶ್ ಅಂಬಾನಿ ಸಿಹಿ ಸುದ್ದಿ ನೀಡಿದ್ದಾರೆ. 1:1 ಅನುಪಾತದಲ್ಲಿ ಬೋನಸ್ ಷೇರುಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಸೆ.5ರಂದು ನಡೆಯುವ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದಿದ್ದಾರೆ. ಈ ಹಿಂದೆಯೂ ಕಂಪೆನಿ 6 ಬಾರಿ ಬೋನಸ್ ಷೇರ್ ನೀಡಿದ ಇತಿಹಾಸವಿದೆ. ಕಂಪೆನಿಯ ಪ್ರಬಲ ಆರ್ಥಿಕ ಪ್ರದರ್ಶನ ಹಿನ್ನೆಲೆಯಲ್ಲಿ ಷೇರುದಾರರಿಗೆ ಬಹುಮಾನ ರೂಪದಲ್ಲಿ ಬೋನಸ್ ನೀಡಲಾಗುತ್ತಿದೆ ಎಂದಿದ್ದಾರೆ.
ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ!
ಅತ್ತ ರಿಲಯನ್ಸ್ ಸಂಸ್ಥೆಯು ತನ್ನ “ಎಐ’ ಕನಸನ್ನು ಬಿತ್ತುತ್ತಲೇ, ಇತ್ತ ಮುಂಬಯಿ ಷೇರುಪೇಟೆಯಲ್ಲಿ ಸಕಾರಾತ್ಮಕ ಸಂಚಲನ ಕಂಡುಬಂದಿದೆ. ಷೇರುಗಳ ಖರೀದಿಯಲ್ಲಿ ಹೂಡಿಕೆದಾರರು ಆಸಕ್ತಿ ವಹಿಸಿದ ಪರಿಣಾಮ, ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ ದಿನಾಂತ್ಯಕ್ಕೆ ಸಾರ್ವಕಾಲಿಕ ಮಟ್ಟಕ್ಕೇರಿವೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 349 ಅಂಕ ಏರಿಕೆಯಾಗಿ, ಸಾರ್ವಕಾಲಿಕ 82,134ರಲ್ಲಿ ವಹಿವಾಟು ಅಂತ್ಯಗೊಳಿಸಿದರೆ, ನಿಫ್ಟಿ 99 ಅಂಕ ಏರಿಕೆಯಾಗಿ, ದಾಖಲೆಯ 25,151ರಲ್ಲಿ ಕೊನೆಗೊಂಡಿದೆ. ಸತತ 11 ದಿನಗಳಿಂದಲೂ ನಿಫ್ಟಿ ಏರಿಕೆಯ ಹಾದಿಯಲ್ಲೇ ಸಾಗಿದ್ದು ವಿಶೇಷ. 2007ರ ಅಕ್ಟೋಬರ್ ಬಳಿತ ಸತತವಾಗಿ ನಿಫ್ಟಿ ದೀರ್ಘಾವಧಿ ಏರಿಕೆಯನ್ನು ಕಂಡಿದ್ದು ಇದೇ ಮೊದಲು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ
Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
BSE ಸೆನ್ಸೆಕ್ಸ್ 83,000 ಮತ್ತೊಂದು ಮೈಲುಗಲ್ಲು
Good News: ಶೀಘ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ? ಪಂಕಜ್ ಜೈನ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.