![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 5, 2021, 12:16 PM IST
ನವ ದೆಹಲಿ : ಟೆಲಿಕಾಂ ನೆಟ್ ವರ್ಕ್ ನ ದೈತ್ಯ ಸಂಸ್ಥೆಬಗಳಲ್ಲಿ ಒಂದಾದ ವೋಡಾಫೋನ್ ಐಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಕಾರ್ಯನಿರ್ವಾಹಣಾಧಿಕಾರಿ ತಮ್ಮ ಸ್ಥಾನಕ್ಕೆ ಕುಮಾರ್ ಮಂಗಳಂ ಬಿರ್ಲಾ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಸಂಸ್ಥೆ, ಕುಮಾರ್ ಮಂಗಳಂ ಬಿರ್ಲಾ ತಮ್ಮ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯಿಂದ ಕೆಳಗಿಳಿದಿದ್ದು, ಈಗ ಆದಿತ್ಯ ಬಿರ್ಲಾ ಸಮೂಹದ ನಾಮನಿರ್ದೇಶಿತರಾದ ಹಿಮಾಂಶು ಕಪಾನಿಯಾ ಅವರನ್ನು ಕಾರ್ಯನಿರ್ವಾಹಣಾಧಿಕಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ ಎಂದು ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಮಾಹಿತಿ ನೀಡಿದೆ.
ಇದನ್ನೂ ಓದಿ : ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ… ವರುಣಾ ಕ್ಷೇತ್ರದ ಮೇಲೆ ಕಣ್ಣಿಟ್ಟ ವಿಜಯೇಂದ್ರ
ಕೆಲವು ವರ್ಷಗಳಿಂದ ಟೆಲಿಕಾಂ ಕ್ಷೇತ್ರದಲ್ಲಿ ವೊಡಾಫೋನ್ ಐಡಿಯಾ ಕಂಪನಿ ಇತರೆ ಕಂಪೆನಿಗಳ ಪೈಪೋಟಿ ನೀಡಲು ಸಾಧ್ಯವಾಗದೇ, ನಷ್ಠ ಅನುಭವಿಸಿದ್ದು, ಈಗ ತನ್ನ ಕಾರ್ಯನಿರ್ವಹಣಾಧೀಕಾರಿಯನ್ನು ಬದಲಾವಣೆ ಮಾಡಿದೆ.
ಕುಮಾರ್ ಮಂಗಳಂ ಬಿರ್ಲಾ, ಕಾರ್ಯ ನಿರ್ವಹಣಾಧಿಕಾರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಸಲ್ಲಿಸಿದ್ದ ಅರ್ಜಿ ಕೋರಿ ಮನವಿಯನ್ನು ವೊಡಾಫೋನ್ ಐಡಿಯಾದ ನಿರ್ದೇಶಕರ ಮಂಡಳಿಯ ಸಭೆಯಲ್ಲಿ, ಅಂಗೀಕರಿಸಿದೆ.
ಈ ಹಿನ್ನೆಲೆಯಲ್ಲಿ ಮಂಡಳಿಯು “ನಾನ್-ಎಕ್ಸಿಕ್ಯುಟಿವ್ ಡೈರೆಕ್ಟರ್” ಆಗಿರುವ ಹಿಮಾಂಶು ಕಪಾನಿಯಾ ಅವರನ್ನು “ಅವಿರೋಧವಾಗಿ ಆಯ್ಕೆ ಮಾಡಿದೆ” ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಪಾನಿಯಾ ಕಳೆದ 25 ವರ್ಷಗಳ ಕಾಲ ಟೆಲಿಕಾಂ ಉದ್ಯಮದಲ್ಲಿ ಅನುಭವ ಹೊಂದಿದ್ದು, ಕೆಲವು ಟೆಲಿಕಾಂ ಕಂಪನಿಗಳಲ್ಲಿ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿದ್ದಾರೆ.
ಇನ್ನು ಎರಡು ವರ್ಷಗಳ ಕಾಲ ಗ್ಲೋಬಲ್ ಜಿಎಸ್ ಎಮ್ ಎ ಬೋರ್ಡ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (COAI) ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.
ಮಾತ್ರವಲ್ಲದೇ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ, ಮಂಡಳಿಯು ಆದಿತ್ಯ ಬಿರ್ಲಾ ಸಮೂಹದ ನಾಮನಿರ್ದೇಶಿತ ಸುಶೀಲ್ ಅಗರ್ವಾಲ್ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಿದೆ ಎಂದು ಕೂಡು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ : ಜಮೀರ್ ಅಹಮದ್, ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ: ಐಎಂಎ ನಂಟು?
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
You seem to have an Ad Blocker on.
To continue reading, please turn it off or whitelist Udayavani.