LIC: ವಾರ್ಷಿಕ ಆದಾಯದಲ್ಲಿ ಶೇ.9.83 ಹೆಚ್ಚಳ


Team Udayavani, Aug 1, 2020, 6:49 AM IST

LIC: ವಾರ್ಷಿಕ ಆದಾಯದಲ್ಲಿ ಶೇ.9.83 ಹೆಚ್ಚಳ

ಮುಂಬಯಿ: ಸರಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) 2019-20ನೇ ಸಾಲಿನಲ್ಲಿ ಒಟ್ಟಾರೆ 6,15,882.94 ಕೋ. ರೂ. ಆದಾಯವನ್ನು ಗಳಿಸಿದೆ.

ಕಳೆದ ಆರ್ಥಿಕ ವರ್ಷದಲ್ಲಿ 5,60,784.39 ಕೋ. ರೂ. ಆದಾಯ ಗಳಿಸಿದ್ದ ನಿಗಮ ಈ ಬಾರಿ ಶೇ. 9.83ರಷ್ಟು ಹೆಚ್ಚಿನ ಆದಾಯವನ್ನು ಗಳಿಸಿದೆ.

ಈ ವರ್ಷದ ಮಾರ್ಚ್‌ ಅಂತ್ಯಕ್ಕೆ ಮುಕ್ತಾಯಗೊಂಡ 2019-20ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ನಿಗಮವು ಬಿಡುಗಡೆ ಮಾಡಿದೆ.

2018-19ನೇ ಸಾಲಿನಲ್ಲಿ ಎಲ್‌ಐಸಿಯ ಒಟ್ಟಾರೆ ಆಸ್ತಿಯು 31,11,847.28 ಕೋ. ರೂ. ಗಳಾಗಿದ್ದರೆ ಈ ಬಾರಿ ಅದು 31,96,214.81 ಕೋ. ರೂ.ಗಳಿಗೆ ಏರಿಕೆಯಾಗಿದ್ದು, ಶೇ. 2.71ರಷ್ಟು ಬೆಳವಣಿಗೆಯನ್ನು ಕಂಡಿದೆ.

ಮೊದಲ ವರ್ಷದ ಪ್ರೀಮಿಯಂ ಸಂಗ್ರಹದಲ್ಲಿ ಏರಿಕೆ
2019-20ನೇ ಸಾಲಿನಲ್ಲಿ ಎಲ್‌ಐಸಿಯು 1,77,977.07 ಕೋ. ರೂ.ಗಳನ್ನು ಮೊದಲ ವರ್ಷದ ಪ್ರೀಮಿಯಂ ಆಗಿ ಸಂಗ್ರಹಿಸಿ, ಶೇ. 25.17ರಷ್ಟು ಹೆಚ್ಚಳ ದಾಖಲಿಸಿದೆ. ಇದೇ ಮೊದಲ ಬಾರಿಗೆ ಒಟ್ಟಾರೆ 1,26,696.21 ಕೋ. ರೂ.ಗಳ ಹೊಸ ವ್ಯವಹಾರ ಪ್ರೀಮಿಯಂ ಆದಾಯವನ್ನು ಸಂಗ್ರಹಿಸಿದೆ. ಇದು 2018-19ನೇ ಸಾಲಿಗೆ ಹೋಲಿಸಿದಲ್ಲಿ ಶೇ. 39.46ರಷ್ಟು ಹೆಚ್ಚಳವಾಗಿದೆ.

2020ರ ಮಾರ್ಚ್‌ ಅಂತ್ಯಕ್ಕೆ 3,79,062.56 ಕೋ. ರೂ. ಗಳಷ್ಟು ಒಟ್ಟು ಪ್ರೀಮಿಯಂ ಆದಾಯವನ್ನು ಕಲೆಹಾಕುವ ಮೂಲಕ ಶೇ. 12.42ರಷ್ಟು ವೃದ್ಧಿಯನ್ನು ಕಂಡಿದೆ. ಒಟ್ಟು 2,54,222.27 ಕೋ.ರೂ. ಮೊತ್ತವನ್ನು ವಿಮಾ ಪಾಲಿಸಿದಾರರಿಗೆ ವಾಪಸ್‌ ನೀಡಲಾಗಿದ್ದು, ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಶೇ. 1.31ರಷ್ಟು ಹೆಚ್ಚಳ ದಾಖಲಾಗಿದೆ.

ಸರಳ ವ್ಯವಸ್ಥೆಗಳ ಪರಿಚಯ
ಎಲ್‌ಐಸಿಯು ತನ್ನ ಗ್ರಾಹಕರಿಗೆ ಹಲವಾರು ಉತ್ತಮ ವಿಮಾ ಸೇವೆಗಳನ್ನು ಒದಗಿಸುತ್ತಿದ್ದು, ವಿಮಾ ಪಾಲಿಸಿಗಳ ಪ್ರೀಮಿಯಂ ಪಾವತಿಯಲ್ಲಿಯೂ ಅತಿ ಸರಳ ವ್ಯವಸ್ಥೆಗಳನ್ನು ಪರಿಚಯಿಸಿದೆ. ಅಷ್ಟೇ ಅಲ್ಲದೆ ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಡಿಜಿಟಲ್‌ ವ್ಯವಸ್ಥೆ ಮೂಲಕ ಪ್ರೀಮಿಯಂ ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕಳೆದ ವರ್ಷ ಎಲ್‌ಐಸಿ ಪಾಲಿಸಿಗಳ ಪ್ರೀಮಿಯಂ ಪಾವತಿಗೆ ಡಿಜಿಟಲ್‌ ವ್ಯವಸ್ಥೆಯನ್ನು ಬಳಸಿದ ಗ್ರಾಹಕರ ಸಂಖ್ಯೆಯಲ್ಲಿ ಶೇ.36ರಷ್ಟು ಏರಿಕೆಯಾಗಿದೆ.

ಯಾವುದೇ ಪಾಲಿಸಿದಾರರು ಕೋವಿಡ್‌ಗೆ ತುತ್ತಾದ ಸಂದರ್ಭದಲ್ಲಿ ಆ ಗ್ರಾಹಕನಿಗೆ ನಿಗಮದಿಂದ ಪಾವತಿಯಾಗಬೇಕಿರುವ ವಿಮಾ ಮೊತ್ತವನ್ನು ಕ್ಲಪ್ತ ಸಮಯದಲ್ಲಿ ಮರುಪಾವತಿಸಲು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಈವರೆಗೆ 561 ಪಾಲಿಸಿದಾರರಿಗೆ 26.74 ಕೋ. ರೂ. ವಿಮಾ ಮೊತ್ತವನ್ನು ಪಾವತಿಸಲಾಗಿದೆ.

ಇಷ್ಟು ಮಾತ್ರವಲ್ಲದೆ ಕೆಲವೊಂದು ತುರ್ತು ಸಂದರ್ಭಗಳಲ್ಲಿ ವಿಮಾ ಮೊತ್ತದ ಮರುಪಾವತಿ ವ್ಯವಸ್ಥೆಯ ನಿಯಮಾವಳಿಗಳಲ್ಲಿ ಸಡಿಲಿಕೆಗಳನ್ನೂ ಮಾಡಲಾಗಿದೆ. ದೇಶದ ವಿಮಾ ಕಂಪೆನಿಗಳಲ್ಲಿ ಅಗ್ರ ಸ್ಥಾನದಲ್ಲಿರುವ ಎಲ್‌ಐಸಿಯು ದೇಶದ ವಿಮಾ ಪಾಲಿಸಿಗಳ ಮಾರುಕಟ್ಟೆಯಲ್ಲಿ ಶೇ. 75.90ರಷ್ಟು ಪಾಲನ್ನು ಹೊಂದಿದ್ದರೆ ಮೊದಲ ವರ್ಷದ ಪ್ರೀಮಿಯಂನಲ್ಲಿ ಶೇ. 68.74ರಷ್ಟು ಪಾಲನ್ನು ಹೊಂದಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.