ಮುಂಬಯಿ ಶೇರು ಪೇಟೆಯಲ್ಲಿ ಎಚ್ಚರಿಕೆಯ ನಡೆ; ಟಿಸಿಎಸ್ ವಿಕ್ರಮ
Team Udayavani, Apr 20, 2018, 5:25 PM IST
ಮುಂಬಯಿ : ಮುಂಬಯಿ ಶೇರು ಪೇಟೆಯಲ್ಲಿ ಇಂದು ಶುಕ್ರವಾರ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಕಾರಣ ಸೆನೆಕ್ಸ್11.71 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 34,415.58 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 1.25 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು10,564.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಹಾಗಿದ್ದರೂ ಸೆನ್ಸೆಕ್ಸ್ ಮತ್ತು ನಿಫ್ಟಿ ಸಾಪ್ತಾಹಿಕ ನೆಲೆಯಲ್ಲಿ ನಿರಂತರ ನಾಲ್ಕನೇ ವಾರ ತಮ್ಮ ಮುನ್ನಡೆಯನ್ನು ಕಾಯ್ದುಕೊಂಡವು. ವಾರದ ನೆಲೆಯಲ್ಲಿ ಸೆನ್ಸೆಕ್ಸ್ 222.93 ಅಂಕ ಸಂಪಾದಿಸಿದೆಯಾದರೆ ನಿಫ್ಟಿ 83.45 ಅಂಕಗಳನ್ನು ಸಂಪಾದಿಸಿತು.
ಭಾರತದ ಅಗ್ರ ಸಾಫ್ಟ್ ವೇರ್ ಕಂಪೆನಿ ಟಿಸಿಎಸ್ನ ಮಾರುಕಟ್ಟೆ ಬಂಡವಳೀಕರ್ ಶತಕೋಟಿ ಡಾಲರ್ ಆಗಿದ್ದು ಈ ಸಾಧನೆಯನ್ನು ಮಾಡಿರುವ ಭಾರತದ ಮೊದಲ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾದುದು ಇಂದು ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಸಂಚಲನ ಉಂಟು ಮಾಡಿತು.
ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಇಂದು ಶುಕ್ರವಾರದ ವಹಿವಾಟು ಕೊನೆಗೊಂಡಾಗ ಟಿಸಿಎಸ್ ಶೇರು ಧಾರಣೆ ಶೇ.6.43ರಷ್ಟು ಏರಿ 3,395.90 ರೂ. ಮಟ್ಟಕ್ಕೆ ತಲುಪಿತು.
ಮಾರ್ಚ್ 2018ಕ್ಕೆ ಕೊನೆಗೊಂಡ ತ್ತೈಮಾಸಿಕದಲ್ಲಿ ಟಿಸಿಎಸ್ ಕಂಪೆನಿಯ ಕನ್ಸಾಲಿಡೇಟೆಡ್ ನಿವ್ವಳ ಲಾಭ 6,904 ಕೋಟಿ ರೂ. (ಶೇ.4.4ರ ಏರಿಕೆ) ಏರಿದ್ದು ಕಂಪೆನಿಯ 1 : 1 ರ ಪ್ರಮಾಣದಲ್ಲಿ ಬೋನಸ್ ಶೇರು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!
Dollar Earnings: ಭಾರತದಲ್ಲಿ ಗೌತಮ್ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ
UPI: ವಹಿವಾಟು ಮಿತಿ ಏರಿಕೆಗೆ ಆರ್ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.