![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 22, 2020, 6:11 PM IST
ಮುಂಬೈ: ಕೋವಿಡ್ ವೈರಸ್ ನ ಭಿನ್ನ ಸ್ವರೂಪ ಪತ್ತೆಯಾಗಿದ್ದ ಪರಿಣಾಮ ಷೇರುಪೇಟೆಯ ಮಾರುಕಟ್ಟೆಯಲ್ಲೂ ಸಂಚಲನ ಮೂಡಿಸಿದ್ದು ಭಾರೀ ಕುಸಿತ ಕಂಡಿದ್ದ ಮುಂಬೈ ಷೇರುಪೇಟೆ ವಹಿವಾಟು ಮಂಗಳವಾರ(ಡಿಸೆಂಬರ್ 22, 2020) ಸೆನ್ಸೆಕ್ಸ್ ಸೂಚ್ಯಂಕ 453 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಬ್ಯಾಂಕಿಂಗ್ ವಲಯದ ಶೇರು ಭರ್ಜರಿ ವಹಿವಾಟು ನಡೆಸಿದ ಪರಿಣಾಮ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ದಿನಾಂತ್ಯದ ವಹಿವಾಟಿನಲ್ಲಿ 452.73 ಅಂಕಗಳಷ್ಟು ಏರಿಕೆಯೊಂದಿಗೆ 46,006.69 ಅಂಕಗಳೊಂದಿಗೆ ಕೊನೆಗೊಂಡಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕದ ಏರಿಕೆ ಜತೆಗೆ ನಿಫ್ಟಿ ಕೂಡಾ 137.90 ಅಂಕಗಳಷ್ಟು ಏರಿಕೆಯೊಂದಿಗೆ 13,466.30 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿರುವುದಾಗಿ ಮಾರುಕಟ್ಟೆ ವರದಿ ತಿಳಿಸಿದೆ.
ಭರ್ಜರಿ ಷೇರು ವಹಿವಾಟಿನ ಪರಿಣಾಮ ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಇನ್ಫೋಸಿಸ್, ಪವರ್ ಗ್ರಿಡ್, ಸನ್ ಫಾರ್ಮಾ, ನೆಸ್ಲೆ, ಎಲ್ ಟಿ, ಟೈಟಾನ್, ಭಾರ್ತಿ ಏರ್ ಟೆಲ್, ಏಷಿಯನ್ ಪೆಯಿಂಟ್, ಟಿಸಿಎಸ್ ಷೇರುಗಳು ಶೇ.5.09ರಷ್ಟು ಏರಿಕೆ ಕಂಡು ಲಾಭ ಗಳಿಸಿವೆ.
ಮತ್ತೊಂದೆಡೆ ಕೋಟಕ್ ಬ್ಯಾಂಕ್, ಬಜಾಜ್ ಫೈನಾನ್ಸ್, ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಸ್ ಲ್ಯಾಂಡ್ ಬ್ಯಾಂಕ್ ಷೇರು ಕುಸಿತ ಕಂಡು ನಷ್ಟ ಅನುಭವಿಸಿದೆ.
ಬ್ರಿಟನ್ ನಲ್ಲಿ ಕೊರೊನಾವೈರಸ್ನ ಭಿನ್ನ ಸ್ವರೂಪ ಪತ್ತೆಯಾಗಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ, ಮುಂದಿನ ವರ್ಷ ಆರ್ಥಿಕ ಚೇತರಿಕೆಯಾಗಬಹುದು ಎಂಬ ನಿರೀಕ್ಷೆಯ ಮೇಲೆ ದಟ್ಟ ಕಾರ್ಮೋಡ ಕವಿಯುವಂತೆ ಮಾಡಿತ್ತು.
ಈ ಎಲ್ಲ ಭೀತಿಗಳಿಂದಾಗಿ ಹೂಡಿಕೆದಾರರು ಸೋಮವಾರ ಒಂದೇ ಸಮನೆ ಷೇರುಗಳ ಮಾರಾಟದಲ್ಲಿ ತೊಡಗಿಸಿಕೊಂಡ ಪರಿಣಾಮ, ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1407 ಅಂಕಗಳ ಕುಸಿತ ದಾಖಲಿಸಿ, ದಿನಾಂತ್ಯಕ್ಕೆ 45,553.96ರಲ್ಲಿ ಕೊನೆಗೊಂಡಿತ್ತು.
ನಿಫ್ಟಿ ಕೂಡ 432.15 ಅಂಕ ಕುಸಿದು, 13,328.40ರಲ್ಲಿ ವಹಿವಾಟು ಅಂತ್ಯಗೊಳಿಸಿದ್ದು. ಒಎನ್ಜಿಸಿ ಷೇರುಗಳು ಶೇ.9.15ರಷ್ಟು ಕುಸಿದು ಭಾರೀ ನಷ್ಟ ಅನುಭವಿಸಿತ್ತು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.