![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 10, 2019, 1:42 PM IST
ಚೆನ್ನೈ/ನವದೆಹಲಿ: ವಿದ್ಯಾರ್ಥಿಗಳು ಬ್ಯಾಂಕ್ ನಿಂದ ಪಡೆದಿರುವ ಶೈಕ್ಷಣಿಕ ಸಾಲ ಮನ್ನಾದ ಕುರಿತು ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದೆ.
ದೇಶದ ಆರ್ಥಿಕ ಅಭಿವೃದ್ಧಿ ಕುಸಿಯುತ್ತಿರುವ ಸಂದರ್ಭದಲ್ಲಿಯೇ ನಿರುದ್ಯೋಗ ಸಮಸ್ಯೆಯೂ ಏರಿಕೆಯಾಗುತ್ತಿದೆ. ಏತನ್ಮಧ್ಯೆ ಬ್ಯಾಂಕ್ ಗಳಿಂದ ಪಡೆದಿರುವ ಶೈಕ್ಷಣಿಕ ಸಾಲ ಮನ್ನಾ ಮಾಡಲಾಗುತ್ತದೆ ಎಂಬ ಗೊಂದಲ ಎಲ್ಲೆಡೆ ಹಬ್ಬಿದೆ. ಶೇ.7.5ರಷ್ಟು ನಿರುದ್ಯೋಗ ಸಮಸ್ಯೆ ಇದೆ ಎಂದು ಕೇಂದ್ರ ವಿತ್ತ ನಿರ್ವಹಣಾ ಸಂಸ್ಥೆ ತಿಳಿಸಿದೆ. ಜಿಡಿಪಿ ಶೇ.4.5ರಷ್ಟಿದ್ದು, ಇದು ಕಳೆದ ಆರು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಜಿಡಿಪಿ ದರವಾಗಿದೆ.
ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳ ಅಂಕಿ-ಅಂಶದ ಪ್ರಕಾರ, 2016-17ರಿಂದ ಮಾರ್ಚ್ 2019ರವರೆಗೆ ಶೈಕ್ಷಣಿಕ ಸಾಲದ ಮೊತ್ತ 67,685.59 ಕೋಟಿಯಿಂದ 75,450.68 ಕೋಟಿ ರೂಪಾಯಿಗೆ ಏರಿದೆ ಎಂದು ತಿಳಿಸಿದೆ. ಉದ್ಯೋಗದ ಭದ್ರತೆ ಮೇಲೆ ಶಿಕ್ಷಣ ಸಾಲವನ್ನು ನೀಡಲಾಗಿದೆ. ಈವರೆಗೂ ಶಿಕ್ಷಣ ಸಾಲವನ್ನು ಕಟ್ಟಲು ಸಾಧ್ಯವಾಗದೆ ಯಾವುದೇ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿಲ್ಲ ಎಂದು ಪಿಎಸ್ ಬಿ (ಪಬ್ಲಿಕ್ ಸೆಕ್ಟರ್ ಬ್ಯಾಂಕ್ಸ್) ವರದಿ ತಿಳಿಸಿದೆ.
ಶೈಕ್ಷಣಿಕ ಸಾಲ ಮನ್ನಾ ಮಾಡಬೇಕೆಂಬ ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ನೀಡಿದ ಉತ್ತರದಲ್ಲಿ ಸ್ಪಷ್ಟಪಡಿಸಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.