![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 23, 2017, 7:28 PM IST
ಹೊಸದಿಲ್ಲಿ : ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದಕ್ಕೆ ಮತ್ತು ಪ್ಯಾನ್ ಕಾರ್ಡ್ ಪಡೆಯುವುದಕ್ಕೆ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿರುವ ಸರಕಾರದ ಪ್ರಸ್ತಾವವನ್ನು ಸ್ವಾಗತಿಸಿರುವ ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಇದರ ಪ್ರಥಮ ಅಧ್ಯಕ್ಷ ನಂದನ್ ನಿಲೇಕಣಿ ಅವರು “ಸರಕಾರದ ಕ್ರಮ ಅತ್ಯಂತ ಸಮರ್ಪಕವಾಗಿದೆ; ಐಟಿ ರಿಟರ್ನ್ ಮತ್ತು ಪ್ಯಾನ್ಗೆ ಆಧಾರ್ ಕಡ್ಡಾಯ ಮಾಡುವುದರಲ್ಲಿ ತಪ್ಪೇನೂ ಇಲ್ಲ’ ಎಂದು ಹೇಳಿದ್ದಾರೆ.
“ಒಬ್ಬನೇ ವ್ಯಕ್ತಿ ಹಲವು ಪ್ಯಾನ್ ಕಾರ್ಡ್ ಹೊಂದಿರುವುದನ್ನು ಸುಲಭದಲ್ಲಿ ಪತ್ತೆ ಹಚ್ಚಿ ಅಂತಹ ಪ್ಯಾನ್ ಕಾರ್ಡ್ಗಳನ್ನು ರದ್ದು ಪಡಿಸಲು ಸರಕಾರದ ಈ ಕ್ರಮದ ಮೂಲಕ ಸಾಧ್ಯವಾಗುತ್ತದೆ; ಅಲ್ಲದೆ ಆಧಾರ್ ಜೋಡಿಸಲ್ಪಟ್ಟ ಪ್ಯಾನ್ ಕಾರ್ಡ್ ನಂಬರ್ ಅನನ್ಯವಾಗಿರಲು ಸಾಧ್ಯವಾಗುತ್ತದೆ’ ಎಂದು 61ರ ಹರೆಯದ ನಿಲೇಕಣಿ ಹೇಳಿದ್ದಾರೆ.
ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದಕ್ಕೆ ಮತ್ತು ಪ್ಯಾನ್ ಕಾರ್ಡ್ ಪಡೆಯುವುದಕ್ಕೆ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸುವ ವಿವಾದಾತ್ಮಕ ಮಸೂದೆಯನ್ನು ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ಹಿನ್ನೆಲೆಯಲ್ಲಿ ನಿಲೇಕಣಿ ಅವರು ಈ ಹೇಳಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ ಮಾತನಾಡುತ್ತಾ ವಿತ್ತ ಸಚಿವ ಅರುಣ್ ಜೇತ್ಲಿ ಅವರು “ಸದ್ಯೋಭವಿಷ್ಯದಲ್ಲಿ ಆಧಾರ್ ಕಾರ್ಡ್ ಮಾತ್ರವೇ ಎಲ್ಲ ಜನರ ವಿಶಿಷ್ಟ ಗುರುತಿನ ಕಾರ್ಡ್ ಆಗಲಿದೆ’ ಎಂದು ಹೇಳಿದ್ದರು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.