ಚೇತರಿಕೆ ಕಾಣುತ್ತಿರುವ ವಾಹನೋದ್ಯಮ: ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಶೇ.14ರಷ್ಟು ಏರಿಕೆ


Team Udayavani, Sep 11, 2020, 10:11 PM IST

ಚೇತರಿಕೆ ಕಾಣುತ್ತಿರುವ ವಾಹನೋದ್ಯಮ: ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಶೇ.14ರಷ್ಟು ಏರಿಕೆ

ಸಾಂದರ್ಭಿಕ ಚಿತ್ರ

ಮಣಿಪಾಲ: ಕೋವಿಡ್‌ ನಡುವೆಯೂ ದೇಶಾದ್ಯಂತ ಅನ್‌ಲಾಕ್‌ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿಯೇ ವಾಣಿಜ್ಯ ಕ್ಷೇತ್ರವೂ ಕೊಂಚ ಚೇತರಿಕೆ ಕಾಣುತ್ತಿದ್ದು, ದೇಶದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟವು ಆಗಸ್ಟ್‌ನಲ್ಲಿ ಶೇ. 14.16ರಷ್ಟು ಏರಿಕೆಯಾಗಿ 2,15,916ಕ್ಕೆ ತಲುಪಿದೆ ಎಂದು ವರದಿಯೊಂದು ಹೇಳಿದೆ.

ಸೊಸೈಟಿ ಆಫ್ ಇಂಡಿಯನ್‌ ಆಟೋ ಮೊಬೈಲ್‌ ತಯಾರಕರ (ಸಿಯಾಮ್) ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.3ರಷ್ಟು ಏರಿಕೆಯಾಗಿ 15,59,665ಕ್ಕೆ ತಲುಪಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 15,14,196 ಯುನಿಟ್‌ಗಳಷ್ಟು ಮಾರಾಟವಾಗಿತ್ತು ಎಂದು ತಿಳಿಸಿದೆ.

ಕೋವಿಡ್‌ ಕಾರಣದಿಂದಾಗಿ 2020ರ ವಿತ್ತೀಯ ವರ್ಷದಲ್ಲಿ ಮೊದಲ 9 ತಿಂಗಳುಗಳಲ್ಲಿ ಪ್ರಯಾಣಿಕ ವಾಹನಗಳ ಮಾರಾಟವು ನಿರಂತರವಾಗಿ ಕುಸಿತ ಕಂಡಿದ್ದ ವಾಹನೋದ್ಯಮ ಅನ್‌ಲಾಕ್‌ ಪ್ರಕ್ರಿಯೆ ಬಳಿಕ ವ್ಯಾಪಾರ ವಹಿವಾಟು ಚಟುವಟಿಕೆಗಳು ಬಿರುಸುಗೊಂಡಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಮಾರಾಟವಾಗಿದೆ.

ಇನ್ನು ಪ್ರಯಾಣಿಕ ಕಾರುಗಳ ಮಾರಾಟ 1.24 ಲಕ್ಷ ಆಗಿತ್ತು. 2019ರ ಆಗಸ್ಟ್‌ನಲ್ಲಿ 1.09 ಲಕ್ಷ ಕಾರುಗಳು ಮಾರಾಟ ಆಗಿದ್ದವು. ಈ ಬಾರಿಯ ಆಗಸ್ಟ್‌ನಲ್ಲಿ ಮಾರಾಟವಾಗಿರುವ ಬಹುಉಪಯೋಗಿ ವಾಹನಗಳ ಸಂಖ್ಯೆ 81,842. ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಈ ಬಗೆಯ ಒಟ್ಟು 70,837 ವಾಹನಗಳು ಮಾರಾಟವಾಗಿದ್ದವು.

ವ್ಯಾನ್‌ಗಳ ಮಾರಾಟದಲ್ಲಿ ಕೂಡ ಹೆಚ್ಚಳ ಕಂಡುಬಂದಿದ್ದು, ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಒಟ್ಟು 9,015 ವ್ಯಾನ್‌ಗಳ ಮಾರಾಟ ಆಗಿತ್ತು. ಈ ಆಗಸ್ಟ್‌ನಲ್ಲಿ 9,359 ವ್ಯಾನ್‌ಗಳು ಮಾರಾಟವಾಗಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ 3ರಷ್ಟು ಹೆಚ್ಚಳ ಕಂಡುಬಂದಿದೆ. ಮೋಟರ್‌ ಸೈಕಲ್‌ ಮಾರಾಟವು 10,32,476 ಯುನಿಟ್‌ ಆಗಿದ್ದು, 2019ರ ಆಗÓr…ನಲ್ಲಿ 9,37,486 ಯುನಿಟ್‌ಗಳಿತ್ತು. ಹೀಗಾಗಿ ಶೇ.10.13ರಷ್ಟು ಏರಿಕೆಯಾಗಿದೆ. ಸ್ಕೂಟರ್‌ ಮಾರಾಟವು ಶೇ.12.3ರಷ್ಟು ಇಳಿಕೆಯಾಗಿ 4,56,848ಕ್ಕೆ ತಲುಪಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 5,20,898 ಯುನಿಟ್‌ ಮಾರಾಟವಾಗಿತ್ತು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.