![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 11, 2020, 10:11 PM IST
ಸಾಂದರ್ಭಿಕ ಚಿತ್ರ
ಮಣಿಪಾಲ: ಕೋವಿಡ್ ನಡುವೆಯೂ ದೇಶಾದ್ಯಂತ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿಯೇ ವಾಣಿಜ್ಯ ಕ್ಷೇತ್ರವೂ ಕೊಂಚ ಚೇತರಿಕೆ ಕಾಣುತ್ತಿದ್ದು, ದೇಶದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟವು ಆಗಸ್ಟ್ನಲ್ಲಿ ಶೇ. 14.16ರಷ್ಟು ಏರಿಕೆಯಾಗಿ 2,15,916ಕ್ಕೆ ತಲುಪಿದೆ ಎಂದು ವರದಿಯೊಂದು ಹೇಳಿದೆ.
ಸೊಸೈಟಿ ಆಫ್ ಇಂಡಿಯನ್ ಆಟೋ ಮೊಬೈಲ್ ತಯಾರಕರ (ಸಿಯಾಮ್) ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.3ರಷ್ಟು ಏರಿಕೆಯಾಗಿ 15,59,665ಕ್ಕೆ ತಲುಪಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 15,14,196 ಯುನಿಟ್ಗಳಷ್ಟು ಮಾರಾಟವಾಗಿತ್ತು ಎಂದು ತಿಳಿಸಿದೆ.
ಕೋವಿಡ್ ಕಾರಣದಿಂದಾಗಿ 2020ರ ವಿತ್ತೀಯ ವರ್ಷದಲ್ಲಿ ಮೊದಲ 9 ತಿಂಗಳುಗಳಲ್ಲಿ ಪ್ರಯಾಣಿಕ ವಾಹನಗಳ ಮಾರಾಟವು ನಿರಂತರವಾಗಿ ಕುಸಿತ ಕಂಡಿದ್ದ ವಾಹನೋದ್ಯಮ ಅನ್ಲಾಕ್ ಪ್ರಕ್ರಿಯೆ ಬಳಿಕ ವ್ಯಾಪಾರ ವಹಿವಾಟು ಚಟುವಟಿಕೆಗಳು ಬಿರುಸುಗೊಂಡಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಮಾರಾಟವಾಗಿದೆ.
ಇನ್ನು ಪ್ರಯಾಣಿಕ ಕಾರುಗಳ ಮಾರಾಟ 1.24 ಲಕ್ಷ ಆಗಿತ್ತು. 2019ರ ಆಗಸ್ಟ್ನಲ್ಲಿ 1.09 ಲಕ್ಷ ಕಾರುಗಳು ಮಾರಾಟ ಆಗಿದ್ದವು. ಈ ಬಾರಿಯ ಆಗಸ್ಟ್ನಲ್ಲಿ ಮಾರಾಟವಾಗಿರುವ ಬಹುಉಪಯೋಗಿ ವಾಹನಗಳ ಸಂಖ್ಯೆ 81,842. ಹಿಂದಿನ ವರ್ಷದ ಆಗಸ್ಟ್ನಲ್ಲಿ ಈ ಬಗೆಯ ಒಟ್ಟು 70,837 ವಾಹನಗಳು ಮಾರಾಟವಾಗಿದ್ದವು.
ವ್ಯಾನ್ಗಳ ಮಾರಾಟದಲ್ಲಿ ಕೂಡ ಹೆಚ್ಚಳ ಕಂಡುಬಂದಿದ್ದು, ಹಿಂದಿನ ವರ್ಷದ ಆಗಸ್ಟ್ನಲ್ಲಿ ಒಟ್ಟು 9,015 ವ್ಯಾನ್ಗಳ ಮಾರಾಟ ಆಗಿತ್ತು. ಈ ಆಗಸ್ಟ್ನಲ್ಲಿ 9,359 ವ್ಯಾನ್ಗಳು ಮಾರಾಟವಾಗಿವೆ.
ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ 3ರಷ್ಟು ಹೆಚ್ಚಳ ಕಂಡುಬಂದಿದೆ. ಮೋಟರ್ ಸೈಕಲ್ ಮಾರಾಟವು 10,32,476 ಯುನಿಟ್ ಆಗಿದ್ದು, 2019ರ ಆಗÓr…ನಲ್ಲಿ 9,37,486 ಯುನಿಟ್ಗಳಿತ್ತು. ಹೀಗಾಗಿ ಶೇ.10.13ರಷ್ಟು ಏರಿಕೆಯಾಗಿದೆ. ಸ್ಕೂಟರ್ ಮಾರಾಟವು ಶೇ.12.3ರಷ್ಟು ಇಳಿಕೆಯಾಗಿ 4,56,848ಕ್ಕೆ ತಲುಪಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 5,20,898 ಯುನಿಟ್ ಮಾರಾಟವಾಗಿತ್ತು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.