![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 25, 2021, 11:21 AM IST
ನವ ದೆಹಲಿ: ಸತತವಾಗಿ 10 ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ಕಳೆದ ವಾರಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 14 ಪೈಸೆ ಕಡಿತಗೊಳಿಸಿದ್ದವು.
ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಡಿಸೇಲ್ ಬೆಲೆ ಎಷ್ಟಿದೆ..?
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90 ರೂಪಾಯಿ 40 ಪೈಸೆ ಆಗಿದೆ. ಪ್ರತಿ ಲೀಟರ್ ಡೀಸೆಲ್ ದರ 80 ರೂಪಾಯಿ 73 ಪೈಸೆ ಆಗಿದೆ.
ಮುಂಬೈ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96 ರೂಪಾಯಿ 83 ಪೈಸೆ ಇದ್ದರೇ, ಪ್ರತಿ ಲೀಟರ್ ಡೀಸೆಲ್ ದರ 87 ರೂಪಾಯಿ 81 ಪೈಸೆಯಷ್ಟಿದೆ.
ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 92 ರೂಪಾಯಿ 43 ಪೈಸೆ ಆಗಿದ್ದರೇ, ಪ್ರತಿ ಲೀಟರ್ ಡೀಸೆಲ್ ದರ 85 ರೂಪಾಯಿ 75 ಪೈಸೆ ಇದೆ.
ಓದಿ : ಆ್ಯಂಬುಲೆ ನ್ಸ್ ನಿರ್ವಹಣೆಗೆ ಬಿಎಂಟಿಸಿ ತನಿಖಾದಳ ಸಾಥ್
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು ಗಮನಿಸಿದಾಗ 90 ರೂಪಾಯಿ 20 ಆಗಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 83 ರೂಪಾಯಿ 61 ಪೈಸೆ ಇದೆ.
ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಅನ್ನು 93 ರೂಪಾಯಿ 43 ಪೈಸೆ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 85 ರೂಪಾಯಿ 60 ಪೈಸೆ ಇದೆ.
ಇನ್ನು, ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 88 ರೂಪಾಯಿ 72 ಪೈಸೆ ಇದ್ದರೆ. ಪ್ರತಿ ಲೀಟರ್ ಡೀಸೆಲ್ ಬೆಲೆ 81 ರೂಪಾಯಿ 13 ಪೈಸೆ ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ ಕಂಡಿರುವ ಕಾರಣದಿಂದಾಗಿ ಏಪ್ರಿಲ್ ತಿಂಗಳ ಮೊದಲು 15 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ದರವನ್ನು ಬದಲಾವಣೆ ಮಾಡಿರಲಿಲ್ಲ. 15 ದಿನಗಳ ನಂತರ ಗುರುವಾರ ಮೊದಲಬಾರಿಗೆ ಕಡಿತ ಕಂಡಿತು. ಅದಕ್ಕೂ ಮೊದಲು ಮಾರ್ಚ್ ತಿಂಗಳ ಕೊನೆಯ 30ನೇ ತಾರೀಕಿನಂದು ಕಡಿತಗೊಳಿಸಲಾಗಿತ್ತು. ಆದರೂ ಪೆಟ್ರೋಲ್, ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿಯೇ ಇದೆ.
ಓದಿ : ಲಾಕ್ಡೌನ್ ನಡುವೆ ಸರಳವಾಗಿ ನಡೆದ ರಾಜ್ ಕುಮಾರ್ ಹುಟ್ಟುಹಬ್ಬ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.