![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2021, 4:24 PM IST
ನವ ದೆಹಲಿ : ದೇಶದ ಎರಡನೇ ಅತ್ಯಂತ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಂದು ಕರೆಸಿಕೊಳ್ಳುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಹೊರಡಿಸಿದೆ.
ಹೌದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಲ್ಲ ರೀತಿಯ ಸಾಲಗಳಿಗೆ ಎಲ್ಲ ಬಗೆಯ ಪ್ರೊಸೆಸ್ ಫೀಗಳು ಮತ್ತು ದಾಖಲಾತಿ ಶುಲ್ಕಗಳನ್ನು ಮನ್ನಾ ಮಾಡಿದೆ. ಗ್ರಾಹಕರಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ಪ್ರೊಸೆಸಿಂಗ್ ಫೀ ಮನ್ನಾ ಮಾಡಿದ ಮೊದಲ ಬ್ಯಾಂಕ್ ಪಿಎನ್ಬಿ ಅಥವಾ ಪಂಜಾಬ್ ನ್ಯಾಷನಲ್ ಬ್ಯಾಂಕ್ ಆಗಿದೆ.
ಇದನ್ನೂ ಓದಿ : ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿ ಪಾಲಿಸಿ: ಪೊಲೀಸರಿಗೆ ಗೃಹ ಸಚಿವರ ತಾಕೀತು
ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಕೊಡುಗೆಯನ್ನು ಫೆಸ್ಟಿವಲ್ ಬೊನಾಂಜಾ ಎಂದು ಕರೆಯಲಾಗುತ್ತದೆ ಮತ್ತು ಅರ್ಥಶಾಸ್ತ್ರಜ್ಞರು ಹಾಗೂ ಮಾರುಕಟ್ಟೆ ವಿಶ್ಲೇಷಕರು ಹೇಳುವಂತೆ, ಆರ್ಥಿಕತೆಯಲ್ಲಿ ಚೈತನ್ಯವನ್ನು ತುಂಬಲು ಎದುರು ನೋಡುತ್ತಿರುವ ಹಬ್ಬದ ಋತುವಿನ ಬೇಡಿಕೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ಗೃಹ, ವಾಹನ, ಆಸ್ತಿ, ವೈಯಕ್ತಿಕ, ಪಿಂಚಣಿ ಮತ್ತು ಚಿನ್ನದ ಸಾಲಗಳಂತಹ ಎಲ್ಲಾ ಚಿಲ್ಲರೆ ಸಾಲಗಳನ್ನು ಈ ಅಟೆಂಡೆಂಟ್ ಶುಲ್ಕವಿಲ್ಲದೆ ನೀಡಲಾಗುತ್ತದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಈಗ ಗೃಹ ಸಾಲದ ಮೇಲೆ ಶೇಕಡಾ 6.80 ಮತ್ತು ಕಾರು ಸಾಲದ ಮೇಲೆ ಶೇಕಡಾ 7.15ರಿಂದ ಆರಂಭವಾಗುವಂತೆ ಬಡ್ಡಿದರವನ್ನು ನೀಡುತ್ತಿದೆ. ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರಗಳು ಶೇಕಡಾ 8.95 ರಿಂದ ಆರಂಭವಾಗುತ್ತವೆ. ಇದು ಬ್ಯಾಂಕಿಂಗ್ ವಲಯದಲ್ಲಿ ಅತ್ಯಂತ ಕಡಿಮೆ. ಗೃಹ ಸಾಲದ ಟಾಪ್- ಅಪ್ ಗಳು ಯಾವುದೇ ಪ್ರೊಸೆಸಿಂಗ್ ಶುಲ್ಕವಿಲ್ಲ ಎಂದು ಬ್ಯಾಂಕ್ ಹೇಳಿದೆ.
ಪ್ರಸ್ತುತ, ಬ್ಯಾಂಕ್ ಶೇ 2.90 ಬಡ್ಡಿದರವನ್ನು ನೀಡುತ್ತದೆ ಮತ್ತು ಇದು ಅಸ್ತಿತ್ವದಲ್ಲಿರುವ ಹಾಗೀ ಹೊಸ ಉಳಿತಾಯ ಖಾತೆಗಳಿಗೆ ಅನ್ವಯಿಸುತ್ತದೆ. ಯಾವುದೇ ಮೊತ್ತದ ಠೇವಣಿ ಈ ದರವನ್ನು ನಿಯಂತ್ರಿಸುತ್ತದೆ.
ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಪಿಎನ್ ಬಿ ಬಡ್ಡಿದರವನ್ನು 10 ಬೇಸಿಸ್ ಪಾಯಿಂಟ್ ಅಥವಾ ಶೇ 0.1 ಇಳಿಕೆ ಮಾಡಿದೆ.
ಇದನ್ನೂ ಓದಿ : ಅಡಿಕೆ ಬೆಳೆಗಾರರಿಗೆ ಬಂಪರ್: ಅರ್ಧಲಕ್ಷದ ಗಡಿ ದಾಟಿದ ದೇಸಿ ಕೆಂಪಡಿಕೆ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.