![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 30, 2021, 3:04 PM IST
ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಹೊಸ ಅಧಿಸೂಚನೆ ಹೊರಡಿಸಿದೆ.
ಖಾತೆಯಲ್ಲಿನ ಹಣ ವಿಥ್ ಡ್ರಾ ಮಾಡುವ ಹೊಸ ನಿಯಮಗಳ ಬಗ್ಗೆ ಹೇಳಲಾಗಿದ್ದು, ಹೋಂ ಬ್ರಾಂಚ್ ಅಥವಾ ಪ್ರಧಾನ ಶಾಖೆ ಬಿಟ್ಟು ಬೇರೆ ಶಾಖೆಗಳಲ್ಲಿ ಹಣ ವಿಥ್ ಡ್ರಾ ಮಾಡುವ ಮಿತಿಯನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ : ಕೋವಿಡ್ 19 : ದೇಶೀಯ ವಿಮಾನಯಾನ ಇನ್ಮುಂದೆ ದುಬಾರಿ..!
ಈ ಬಗ್ಗೆ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ತನ್ನ ಗ್ರಾಹಕರಿಗೆ ಮಾಹಿತಿ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೋವಿಡ್ ಸೋಂಕಿನ ಸಂದರ್ಭದಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಚೆಕ್ ಅಥವಾ ಸ್ಲಿಪ್ ಮೂಲಕ ಇತರೆ ಶಾಖೆಗಳಲ್ಲಿ ಹಣ ವಿಥ್ ಡ್ರಾ ಮಾಡುವುದಕ್ಕೆ ಇದ್ದ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಗ್ರಾಹಕರು ಯಾವುದೇ ಎಸ್ ಬಿ ಐ ಶಾಖೆಯಲ್ಲಿ ದಿನವೊಂದಕ್ಕೆ ಉಳಿತಾಯ ಖಾತೆಯಿಂದ 25,000 ರೂಪಾಯಿಗಳನ್ನು ವಿಥ್ ಡ್ರಾ ಮಾಡಬಹುದಾಗಿದೆ.
To support our customers in this pandemic, SBI has increased the non-home cash withdrawal limits through cheque and withdrawal form.
#SBIAapkeSaath #StayStrongIndia #CashWithdrawal #Covid19 #BankSafe #StaySafe pic.twitter.com/t4AXY4Rzqh— State Bank of India (@TheOfficialSBI) May 29, 2021
ಇನ್ನು, ಚೆಕ್ ಮೂಲಕ ಹಣ ವಿತ್ ಡ್ರಾ ಮಾಡುವ ಮಿತಿ 1 ಲಕ್ಷ ರೂಪಾಯಿವರೆಗೆ ಇರಲಿದ್ದು, ಥರ್ಡ್ ಪಾರ್ಟಿಗೆ ಚೆಕ್ ಮೂಲಕ ಹಣ ವಿಥ್ ಡ್ರಾ ಮಾಡುವ ಮಿತಿಯನ್ನು 50 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಈ ಹೊಸ ಅಧಿಸೂಚನೆಯ ಪ್ರಕಾರ, ಹೊಸ ನಿಯಮಗಳು ತಕ್ಷಣದಿಂದ ಜಾರಿಗೆ ತರಲಾಗಿದೆ. ಈ ನಿಯಮಗಳು ಸೆಪ್ಟೆಂಬರ್ 30, 2021 ರವರೆಗೆ ಜಾರಿಯಲ್ಲಿರುತ್ತವೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ.
ಇದನ್ನೂ ಓದಿ : ತೆಂಕಿಲ : ಮಹಿಳೆಯೋರ್ವರ ಕರಿಮಣಿ ಸರ ಎಳೆದು ಬೈಕ್ ನಲ್ಲಿ ಪರಾರಿಯಾದ ಅಪರಿಚಿತರು
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.