![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2021, 10:55 AM IST
ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯ ಅನಿಶ್ಚಿತ ವಹಿವಾಟಿನ ನಡುವೆಯೇ ಮುಂಬಯಿ ಷೇರು ಮಾರುಕಟ್ಟೆಯ ಗುರುವಾರ(ಫೆ.18, 2021)ದ ವಹಿವಾಟು ಚೇತರಿಕೆಯ ಹಾದಿ ಹಿಡಿದಿದ್ದು, ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಸ್ ಬಿಐ ಷೇರುಗಳು ಲಾಭ ಗಳಿಸಿದೆ.
ಮುಂಬಯಿ ಷೇರುಪೇಟೆಯ ಬಿಎಸ್ಇ ಸಂವೇದಿ ಸೂಚ್ಯಂಕ 61.08 ಅಂಕಗಳ ಅಲ್ಪ ಏರಿಕೆಯೊಂದಿಗೆ 51,764.91 ಅಂಕಗಳ ವಹಿವಾಟು ಆರಂಭಿಸಿದೆ. ಎನ್ ಎಸ್ ಇ ನಿಫ್ಟಿ 18.20 ಅಂಕಗಳ ಏರಿಕೆಯೊಂದಿಗೆ 15,227.10 ಅಂಕಗಳ ಗಡಿ ತಲುಪಿದೆ.
ಮುಂಬಯಿ ಷೇರುಪೇಟೆ ಅಲ್ಪ ಚೇತರಿಕೆಯಿಂದ ಒಎನ್ ಜಿಸಿ, ಟೆಕ್ ಮಹೀಂದ್ರಾ, ಎಸ್ ಬಿಐ, ಇನ್ಫೋಸಿಸ್, ಎಚ್ ಸಿಎಲ್ ಟೆಕ್ ಮತ್ತು ಏಷ್ಯನ್ ಪೈಂಟ್ಸ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಐಸಿಐಸಿಐ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿವೆ.
ಬುಧವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 400.34 ಅಂಕಗಳಷ್ಟು ಕುಸಿತ ಕಂಡಿದ್ದು, 51,703.83 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 104.55 ಅಂಕಗಳಷ್ಟು ಕುಸಿತ ಕಂಡಿತ್ತು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.