ಹೂಡಿಕೆದಾರರಿಗೆ ಬಂಪರ್; ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ ದಾಖಲೆ ಏರಿಕೆ


Team Udayavani, Sep 20, 2019, 12:29 PM IST

Market-Up

ಮುಂಬೈ:ಕಳೆದ ಎರಡು ಮೂರು ದಿನಗಳಿಂದ ಭಾರೀ ಕುಸಿತ ಕಾಣುತ್ತಿದ್ದ ಮುಂಬೈ ಶೇರುಪೇಟೆ ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶೀಯ ಕಾರ್ಪೋರೇಟ್ ಕಂಪನಿಗಳ ತೆರಿಗೆಯನ್ನು ಇಳಿಕೆ ಮಾಡಿರುವುದಾಗಿ ಘೋಷಿಸಿದ್ದರಿಂದ ಚಿನಿವಾರ ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಬರೋಬ್ಬರಿ 2,200 ಅಂಕಗಳ ಭಾರೀ ಏರಿಕೆಯೊಂದಿಗೆ 38,378.47 ಅಂಕಗಳ ವಹಿವಾಟು ನಡೆಸಿದೆ.

ಅದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ (ಎನ್ ಎಸ್ ಇ)677.1 ಅಂಕಗಳ ಏರಿಕೆಯೊಂದಿಗೆ 11,381.90 ಅಂಕಗಳ ವಹಿವಾಟು ಕಂಡಿದೆ. ಸೆನ್ಸೆಕ್ಸ್ ಸೂಚ್ಯಂಕ ಭಾರೀ ಏರಿಕೆಯಿಂದ ದೇಶೀಯ ಹೂಡಿಕೆದಾರರಿಗೆ 2.11ಲಕ್ಷ ಕೋಟಿ ರೂಪಾಯಿಯಷ್ಟು ಏರಿಕೆಯಾದಂತಾಗಿದೆ.

ಆರ್ಥಿಕಾಭಿವೃದ್ಧಿಯ ಹಿನ್ನೆಲೆಯಲ್ಲಿ ಜಿಎಸ್ ಟಿ ಮಂಡಳಿ ಸಭೆ ಬಳಿಕ ಮಾತನಾಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದೇಶೀಯ ಕಾರ್ಪೋರೇಟ್ ಸಂಸ್ಥೆಗಳ ತೆರಿಗೆಯನ್ನು ಶೇ.22ಕ್ಕೆ ಇಳಿಸಲಾಗಿದ್ದು, ನೂತನ ಕಾರ್ಪೋರೇಟ್ ಸಂಸ್ಥೆಗಳಿಗೆ ಶೇ.15ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿದ್ದರು.

ಈ ಘೋಷಣೆಯ ಬೆನ್ನಲ್ಲೇ ದೇಶೀಯ ಶೇರುಮಾರುಕಟ್ಟೆ ವಹಿವಾಟು ಭರ್ಜರಿಯಾಗಿ ನಡೆಯುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಇದರಿಂದಾಗಿ ಮಾರುಕಟ್ಟೆ ಶೇರುವಾಹಿಟಿಗೆ ಭರ್ಜರಿ ಬಲ ನೀಡಿದಂತಾಗಿದೆ ಎಂದು ಆರ್ಥಿಕ ವಲಯ ವಿಶ್ಲೇಷಿಸಿದೆ.

ಮುಂಬೈ ಶೇರುಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಭಾರೀ ಏರಿಕೆಯಾಗಿದ್ದರಿಂದ ಟಾಟಾ ಸ್ಟೀಲ್, ಇಂಡಿಯಾಬುಲ್ ಹೌಸಿಂಗ್ ಫೈನಾನ್ಸ್, ಎಚ್ ಡಿಎಫ್ ಸಿ ಬ್ಯಾಂಕ್, ಯೆಸ್ ಬ್ಯಾಂಕ್, ಎಚೇರ್ ಮೋಟಾರ್ಸ್ ಶೇರುಗಳ ಮೌಲ್ಯ ಶೇ.5.45ಕ್ಕೆ ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.