ಆಡಿಯೋ ವೀಡಿಯೋ ಕ್ಷೇತ್ರದತ್ತ ಹೆಚ್ಚುತ್ತಿರುವ ಒಲವು

ಮನೋರಂಜನೆಯ ಗುಣಮಟ್ಟ ಹೆಚ್ಚಿಸಲು ಗ್ರಾಹಕರ ಚಿಂತನೆ

Team Udayavani, Dec 27, 2020, 6:00 AM IST

ಆಡಿಯೋ ವೀಡಿಯೋ ಕ್ಷೇತ್ರದತ್ತ ಹೆಚ್ಚುತ್ತಿರುವ ಒಲವು

ಸಾಂದರ್ಭಿಕ ಚಿತ್ರ

ಭಾರತದಲ್ಲಿ ಕೋವಿಡ್‌ ಬಳಿಕ ಹಲವು ಕ್ಷೇತ್ರಗಳಲ್ಲಿ ಅಮೂಲಾಗ್ರ ಬದಲಾವಣೆಗಳು ಕಂಡುಬರುತ್ತಿವೆ. ಇದಕ್ಕೆ ಮನೋ ರಂಜನೆ ಕ್ಷೇತ್ರವೂ ಹೊರತಾಗಿಲ್ಲ. ಅಧ್ಯಯನವೊಂದರ ವರದಿ ಪ್ರಕಾರ ಜನರು ತಂತ್ರಜ್ಞಾನ ಮತ್ತು ಮನೋರಂಜನೆ ಕ್ಷೇತ್ರವನ್ನು ಹೆಚ್ಚು ಇಷ್ಟ ಪಡುತ್ತಿದ್ದಾರೆ. ಮುಖ್ಯವಾಗಿ ಜನರು ಗುಣಮಟ್ಟದ ಆಡಿಯೋ ಮತ್ತು ವೀಡಿಯೋಗಳಿಗಾಗಿ ಹೆಚ್ಚಿನ ಹಣವನ್ನು ಮೀಸಲಿಡಲು ಸಿದ್ಧರಿದ್ದಾರೆ. ಜತೆಗೆ ತಮ್ಮ ಹೆಚ್ಚಿನ ಸಮಯವನ್ನೂ ಆಡಿಯೋ ಮತ್ತು ವೀಡಿಯೋ ಆನಂದಿಸಲು ಬಳಸುತ್ತಿದ್ದಾರೆ.

ಶೇ. 94
ಡಾಲ್ಬಿ ಸಂಸ್ಥೆಗಾಗಿ “ವೇಕ್‌ ಫೀಲ್ಡ್‌ ರಿಸರ್ಚ್‌ ಸಂಸ್ಥೆ’ ನಡೆಸಿದ ಅಧ್ಯಯನದಿಂದ ಹಲವು ಮಾಹಿತಿಗಳು ತಿಳಿದುಬಂದಿವೆೆ. ಭಾರತದಲ್ಲಿ ಶೇ. 94ರಷ್ಟು ಮಂದಿ ತಮ್ಮ ವೀಡಿಯೋ ಮತ್ತು ಆಡಿಯೋ ಗುಣಮಟ್ಟಕ್ಕಾಗಿ ಪ್ರೀಮಿಯಂ ಚಂದಾದಾರಿಕೆ ಪಡೆಯಲು ಹೆಚ್ಚಿನ ಹಣವನ್ನು ನೀಡಲು ಸಿದ್ಧರಿದ್ದಾರೆ.

ಶೇ. 96
ಸರ್ವೇಯಲ್ಲಿ ಕಂಡುಕೊಂಡ ಇನ್ನೊಂದು ಬಹು ಮುಖ್ಯ ಅಂಶ ಎಂದರೆ ಶೇ. 96ರಷ್ಟು ಜನರು ಮುಂದಿನ 6 ತಿಂಗಳುಗಳಲ್ಲಿ ತಮ್ಮ ಮನೋರಂಜನ ಸಾಧನಗಳನ್ನು ಅಪ್‌ಗ್ರೇಡ್‌ ಮಾಡಲು ಯೋಚಿಸುತ್ತಿದ್ದಾರೆ. ಕೋವಿಡ್‌ ಲಾಕ್‌ಡೌನ್‌ ಅನೇಕ ಭಾರತೀಯರನ್ನು ಮನೋರಂಜನ ಕ್ಷೇತ್ರಕ್ಕೆ ಒಗ್ಗಿಕೊಳ್ಳುವಂತೆ ಪ್ರೇರೇಪಿಸಿದೆ. ಶೇ. 66ರಷ್ಟು ಭಾರತೀಯರು ವಿಶ್ರಾಂತಿ ಪಡೆಯಲು ಮನೋರಂಜನೆಯ ಮೊರೆ ಹೋಗಿದ್ದಾರೆ. ಇದೀಗ ಜನರ ಈ ಅಭಿರುಚಿಯನ್ನು ನೋಡಿಕೊಂಡು ಸಂಗೀತ ಮತ್ತು ವೀಡಿಯೋ ತಯಾರಕ ಕಂಪೆನಿಗಳು ಈ ಸಂದರ್ಭವನ್ನು ಬಳಸಿಕೊಳಕ್ಷೆು ಉತ್ಸುಕವಾಗಿವೆ.

ಎಲ್ಲೆಲ್ಲಿ ಅಧ್ಯಯನ
ಹೊಸದಿಲ್ಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಹೈದರಾಬಾದ್‌ ಮತ್ತು ಅಹ್ಮದಾಬಾದ್‌ ಸಹಿತ ಆರು ನಗರಗಳಲ್ಲಿ ನಡೆಸಿದ ಅಧ್ಯಯನ ಈ ವರದಿಯ ಹಿಂದಿದೆ. ಶೇ. 60ರಷ್ಟು ಜನರು ಮನೋರಂಜನೆಯನ್ನು ಉತ್ತಮ ಸಾಮಾಜಿಕ ಅನುಭವ ಎಂದು ಕಂಡುಕೊಂಡಿ¨ªಾರೆ. ಶೇ. 92ರಷ್ಟು ಜನರು ಸುದ್ದಿ ಮುಖ್ಯಾಂಶಗಳನ್ನು ನೋಡಲು ಬಳಸುತ್ತಿದ್ದಾರೆ.

ಗುಣಮಟ್ಟ ವೃದ್ಧಿ
ಅನೇಕ ಗ್ರಾಹಕರು ತಾವು ಈವರೆಗೆ ತಿಳಿದುಕೊಳ್ಳದ ಹೊಸ ಕ್ಷೇತ್ರಗಳ ಕಡೆಗೆ ಮುಖಮಾಡಿದ್ದಾರೆ. ಅವರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಟ್ರೀಮಿಂಗ್‌ ಲೈವ್‌ ಮ್ಯೂಸಿಕ್‌ ಈವೆಂಟ್‌ಗಳು, ಹಾಸ್ಯ, ವೀಡಿಯೋ ಗೇಮ್‌ ಸ್ಟ್ರೀಮಿಂಗ್‌ ಮೊದಲಾದವುಗಳನ್ನು ನೋಡುತ್ತಿದ್ದಾರೆ.

ಸ್ಮಾರ್ಟ್‌ಫೋನ್‌ ಮನೋರಂಜನ ಸಾಧನ
ಭಾರತದಲ್ಲಿ ಶೇ. 29ರಷ್ಟು ಜನರು ತಮ್ಮ ಸ್ಮಾರ್ಟ್‌ಫೋನ್‌ ಪ್ರಾಥಮಿಕ ಮನೋರಂಜನ ಸಾಧನ ಎಂದಿದ್ದಾರೆ. ಬಳಿಕದ ಸ್ಥಾನಗಳಲ್ಲಿ ಟಿ.ವಿ. (ಶೇ. 22), ಕಂಪ್ಯೂಟರ್‌ (ಶೆ‌. 20) ಇದೆ. ಸ್ಟ್ರೀಮಿಂಗ್‌ ವೀಡಿಯೋಗಳನ್ನು ನೋಡುವಾಗ ಲೈವ್‌-ಚಾಟ್‌ನಲ್ಲಿ ಶೇ. 65ರಷ್ಟು ಮಂದಿ ತೊಡಗಿಕೊಂಡಿದ್ದಾರೆ.

ಸರಾಸರಿ ಹೆಚ್ಚು
ಶೇ. 97ರಷ್ಟು ಮಂದಿ ಆಡಿಯೋ ಮತ್ತು ವೀಡಿಯೋ ಆನಂದಿಸುತ್ತಿದ್ದು, ಇದರ ಪ್ರಮಾಣ ಈ ಹಿಂದಿಗಿಂತ ಶೇ. 48ರಷ್ಟು ಹೆಚ್ಚಾಗಿದೆ. ಕಳೆದ ಆರು ತಿಂಗಳುಗಳಲ್ಲಿ ಶೇ. 88 ರಷ್ಟು ಭಾರತೀಯರು ತಮ್ಮ ಸ್ಟ್ರೀಮಿಂಗ್‌ ಸೇವೆಗಳನ್ನು ನವೀಕರಿಸಲು ಈಗಾಗಲೇ ಹೂಡಿಕೆ ಮಾಡಿಗ್ರೇರೆ. ಮಾತ್ರವಲ್ಲದೆ ಶೇ. 96ರಷ್ಟು ಮಂದಿ ಮುಂದಿನ 6 ತಿಂಗಳುಗಳಲ್ಲಿ ತಮ್ಮ ಮನೋರಂಜನ ಸಾಧನಗಳನ್ನು ನವೀಕರಿಸುವ ಯೋಚನೆಯಲ್ಲಿದ್ದಾರೆ. ಸಲಕರಣೆಗಳ ನವೀಕರಣಗಳು ಉತ್ತಮ ಮೊಬೈಲ್‌ ಸಾಧನಗಳನ್ನೂ ಒಳಗೊಂಡಿವೆ. ಶೇ. 61ರಷ್ಟು ಮಂದಿ ತಮ್ಮ ಮೊಬೈಲ್‌ಅನ್ನು ಅಪ್‌ಗ್ರೇಡ್‌ ಮಾಡಲು ಚಿಂತನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.