![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 1, 2020, 1:22 PM IST
ನವದೆಹಲಿ: ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿಕೊಂಡಿರುವ 1.6 ಲಕ್ಷ ಕೋಟಿ ರೂಪಾಯಿ ಹೊಂದಾಣಿಕೆಯ ಒಟ್ಟು ವರಮಾನ(ಎಜಿಆರ್ ) ಹಣವನ್ನು ಕೇಂದ್ರ ಸರ್ಕಾರಕ್ಕೆ ಪಾವತಿಸಲು ಸುಪ್ರೀಂಕೋರ್ಟ್ ಮಂಗಳವಾರ (ಸೆಪ್ಟೆಂಬರ್ 01, 2020) ಹತ್ತು ವರ್ಷಗಳ ಕಾಲಾವಕಾಶದ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ನ ಜಸ್ಟೀಸ್ ಅರುಣ್ ಮಿಶ್ರಾ, ಜಸ್ಟೀಸ್ ಎಸ್.ಅಬ್ದುಲ್ ನಜೀರ್ ಮತ್ತು ಜಸ್ಟೀಸ್ ಎಂಆರ್ ಶಾ ನೇತೃತ್ವದ ತ್ರಿಸದಸ್ಯ ಪೀಠ, ದೂರಸಂಪರ್ಕ ಕಂಪನಿಗಳು ಬಾಕಿ ಉಳಿಸಿಕೊಂಡಿರುವ ಮೊತ್ತದ ಶೇ.10ರಷ್ಟು ಹಣವನ್ನು 2021ರ ಮಾರ್ಚ್ 31ರೊಳಗೆ ಪಾವತಿಸುವಂತೆ ನಿರ್ದೇಶನ ನೀಡಿದೆ.
ಟೆಲಿಕಾಂ ಕಂಪನಿಯ ಆಡಳಿತ ನಿರ್ದೇಶಕರು ಮತ್ತು ಅಧ್ಯಕ್ಷರು ಹಣ ಪಾವತಿಯು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನ್ವಯ ಅಫಿಡವಿತ್ ಕಡ್ಡಾಯವಾಗಿರಬೇಕು ಎಂದು ಪೀಠ ತಿಳಿಸಿದೆ. ಒಂದು ವೇಳೆ ಟೆಲಿಕಾಂ ಕಂಪನಿಗಳು ಎಜಿಆರ್ ಬಾಕಿ ಪಾವತಿಸುವಲ್ಲಿ ವಿಫಲವಾದರೆ ಅದು ಅಧಿಕ ಬಡ್ಡಿ ಜತೆಗೆ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಎಜಿಆರ್ ಬಾಕಿ ಮೊತ್ತ 92, 000 ಕೋಟಿ ರೂಪಾಯಿಯನ್ನು ಕೂಡಲೇ ಪಾವತಿಸಬೇಕೆಂದು ವಿವಿಧ ಟೆಲಿಕಾಂ ಕಂಪನಿಗಳಿಗೆ ಕಳೆದ ವರ್ಷ ಸುಪ್ರೀಂಕೋರ್ಟ್ ನೀಡಿದ ಆದೇಶದಲ್ಲಿ ತಿಳಿಸಿತ್ತು. ಆದರೆ ಇಷ್ಟೊಂದು ದೊಡ್ಡ ಮೊತ್ತ ಕಡಿಮೆ ಅವಧಿಯಲ್ಲಿ ಪಾವತಿಸಲು ಅಸಾಧ್ಯ ಇದಕ್ಕಾಗಿ ಕಂತು ಪಾವತಿ ಅವಧಿಯನ್ನು 20 ವರ್ಷಕ್ಕೆ ನಿಗದಿಪಡಿಸಬೇಕೆಂದು ಕೋರಿ ಜನವರಿಯಲ್ಲಿ ಟೆಲಿಕಾಂ ಕಂಪನಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು.
ವೋಡ್ ಫೋನ್ ಐಡಿಯಾ ಸುಮಾರು 50,000 ಕೋಟಿ ರೂಪಾಯಿ ಬಾಕಿ ಪಾವತಿಸಲು ಇದ್ದು, ಭಾರ್ತಿ ಏರ್ ಟೆಲ್ 26,000 ಸಾವಿರ ಕೋಟಿ ಬಾಕಿ ಇತ್ತು..ಈ ಎರಡು ಟೆಲಿಕಾಂ ಕಂಪನಿಗಳು 15 ವರ್ಷ ಕಾಲಾವಕಾಶ ಕೇಳಿದ್ದವು. ಆದರೆ ಸುಪ್ರೀಂಕೋರ್ಟ್ ಟೆಲಿಕಾಂ ಕಂಪನಿಗಳ ವಾದವನ್ನು ಪೂರ್ಣವಾಗಿ ಮನ್ನಿಸದೇ ಹತ್ತು ವರ್ಷಗಳಲ್ಲಿ ಬಾಕಿ ಹಣ ಪಾವತಿಸುವಂತೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.