![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 27, 2021, 4:41 PM IST
ನವ ದೆಹಲಿ : ಆಧಾರ್ ಕಾರ್ಡ್ ಭಾರತದ ನಾಗರಿಕರ ಗುರುತಿನ ಚೀಟಿ. ಆಧಾರ್ ಕಾರ್ಡ್ ಇಲ್ಲದೇ ಭಾರತದಲ್ಲಿ ಯಾವುದೇ ಸರ್ಕಾರದ ಪ್ರಯೋಜನವನ್ನು ಪಡೆಯುವುದಕ್ಕೆ ಸಾಧ್ಯವಿಲ್ಲ. ಮಾತ್ರವಲ್ಲ ಈಗೀಗ ಖಾಸಗಿ ಸಂಸ್ಥೆಗಳು ಕೂಡ ಎಲ್ಲಾ ವಹಿವಾಟುಗಳಿಗೆ ಆಧಾರ್ ಕಾರ್ಡ್ ನನ್ನು ಕೇಳಿಯೇ ಕೇಳುತ್ತವೆ. ಅಲ್ಲಿಯ ತನಕ ಆಧಾರ್ ಕಾರ್ಡ್ ಮುಖ್ಯ.
ಆಧಾರ್ ಕಾರ್ಡ್ ನಲ್ಲಿ ಸರ್ಕಾರ ಕೆಲವು ಬದಲಾವಣೆಗಳನ್ನು ತಂದಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಈ ವರ್ಷ ಪಿವಿಸಿ ಆಧಾರ್ ಕಾರ್ಡ್ ನನ್ನು ನೀಡಲು ಮುಂದಾಗಿದೆ.
ಇದನ್ನೂ ಓದಿ : ತರುಣ್ ತೇಜ್ಪಾಲ್ ವಿರುದ್ಧ ಅತ್ಯಾಚಾರ ಪ್ರಕರಣ : ಗೋವಾ ಸರ್ಕಾರ ಹೈಕೋರ್ಟ್ ನಲ್ಲಿ ಮೇಲ್ಮನವಿ
ಯುಐಡಿಎಐ ಆಧಾರ್ ಕಾರ್ಡ್ಗೆ ಸಂಬಂಧಿಸಿದ ಅನೇಕ ಸೇವೆಗಳನ್ನು ಜನರಿಗೆ ಸುಲಭ ಮಾಡಿಕೊಟ್ಟಿದೆ. ಆಧಾರ್ ನಲ್ಲಿರುವ ಫೋಟೋ, ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಸಣ್ಣ ಪ್ರಕ್ರಿಯೆಯ ಮೂಲಕ ಕುಳಿತಲ್ಲಿಂದಲೇ ಮಾಡಿ ಮುಗಿಸಿಕೊಳ್ಳಬಹುದಾದಂತಹ ಸೌಲಭ್ಯವನ್ನು ಜನರಿಗೆ ನೀಡಿದೆ.
ಆದರೆ, ಯುಐಡಿಎಐ ಈಗ ಆಧಾರ್ ಗೆ ಸಂಬಂಧಿಸಿದ ಬಹುಮುಖ್ಯ ಸೇವೆಯೊಂದನ್ನು ನಿಲ್ಲಿಸಿದೆ. ಹೌದು, ಈ ಮೊದಲು, ಆಧಾರ್ ಕಾರ್ಡ್ ಕಳೆದುಕೊಂಡಿದ್ದರೆ ಅಥವಾ ಹರಿದು ಹೋಗಿದ್ದರೆ, ಯುಐಡಿಐಎ ವೆಬ್ ಸೈಟ್ ಮೂಲಕ, ಹೊಸ ಆಧಾರ್ ಕಾರ್ಡ್ ಆರ್ಡರ್ ಮಾಡಿಕೊಳ್ಳಬಹುದಾಗಿತ್ತು. ಇದಕ್ಕಾಗಿ 50 ರೂ. ಪಾವತಿಸಬೇಕಾಗಿತ್ತು. ಆದರೇ ಆ ಸೌಲಭ್ಯವನ್ನು ಇನ್ನು ಮುಂದೆ ಮಾಡಿಕೊಳ್ಳಲು ಸಾಧ್ಯವಿಲ್ಲ.
ಪಿವಿಸಿ ಆಧಾರ್ ಕಾರ್ಡ್ ಎಂದರೇನು..?
ಯುಐಡಿಎಐ ಪಿವಿಸಿ ಸ್ವರೂಪದಲ್ಲಿ ಆಧಾರ್ ಕಾರ್ಡ್ ನನ್ನು ತಯಾರಿಸುತ್ತಿದೆ. ಡೆಬಿಟ್ ಕಾರ್ಡ್ ನನ್ನು ಹೋಲುವ ರೀತಿಯಲ್ಲಿ ಇನ್ನು ಮುಂದೆ ಬರುವ ಆಧಾರ್ ಕಾರ್ಡ್ ಇರಲಿದೆ. ಯುಐಡಿಎಐ ಹಿಂದೆ ಇದ್ದ ದೊಡ್ಡ ಗಾತ್ರದ ಆಧಾರ್ ಕಾರ್ಡ್ ನ ಮುದ್ರಣ ನಿಲ್ಲಿಸಿದ್ದು, ಅದನ್ನು ಪಿವಿಸಿ ಆಧಾರ್ ಕಾರ್ಡ್ ಗೆ ಸ್ವರೂಪಕ್ಕೆ ಪರಿವರ್ತಿಸುತ್ತಿದೆ.
ಹಳೆಯ ಆಧಾರ್ ಕಾರ್ಡ್ ನನ್ನು ಬದಲಾಯಿಸಿ ಪಿವಿಸಿ ಆಧಾರ್ ಕಾರ್ಡ್ ಪಡೆಯಬಹುದೇ..?
ಖಂಡಿತ ಸಾಧ್ಯವಿದೆ. ಪಿವಿಸಿ ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಯುಐಡಿಎಐ ವೆಬ್ಸೈಟ್ ಮೂಲಕ ನಿವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಪಿವಿಸಿ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ ?
ನಿಮ್ಮ ನೊಂದಾಯಿತ ವಿಳಾಸಕ್ಕೆ ನಿಮ್ಮ ಪಿವಿಸಿ ಆಧಾರ್ ಕಾರ್ಡ್ ಪೋಸ್ಟ್ ಮೂಲಕ ತಲುಪುತ್ತದೆ.
ಇದನ್ನೂ ಓದಿ : ಮೇ 27ರಂದು ಒಡಿಶಾ, ಪಶ್ಚಿಮಬಂಗಾಳಕ್ಕೆ ಪ್ರಧಾನಿ ಮೋದಿ ಭೇಟಿ, ವೈಮಾನಿಕ ಸಮೀಕ್ಷೆ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.