Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ
Team Udayavani, Oct 25, 2024, 6:01 PM IST
ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್, 2024-25ನೇ ಹಣಕಾಸು ವರ್ಷದ ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ 2ನೇ ತ್ರೈಮಾಸಿಕದ ತನ್ನ ಹಣಕಾಸು ಸಾಧನೆ ಪ್ರಕಟಿಸಿದ್ದು, 461 ಕೋಟಿ ರೂ ಗಳಷ್ಟು ಕಾರ್ಯಾಚರಣೆ ಲಾಭ ಮತ್ತು 233 ಕೋಟಿ ರೂ ಗಳಷ್ಟು ನಿವ್ವಳ ಲಾಭ ಗಳಿಸಿದೆ.
ಈ ಅವಧಿಯಲ್ಲಿನ ಠೇವಣಿ ಮೊತ್ತವು 34,070 ಕೋಟಿ ರೂ ಗಳಿಗೆ ಹೆಚ್ಚಳಗೊಂಡಿದ್ದು, ವರ್ಷದಿಂದ ವರ್ಷಕ್ಕೆ ಶೇ 17ರಷ್ಟು ಮತ್ತು ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಶೇ 5ರಷ್ಟು ಏರಿಕೆ ಕಂಡಿದೆ. ಒಟ್ಟು ಸಾಲದ ಪ್ರಮಾಣವು 30,344 ಕೋಟಿ ರೂ ಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ 14ರಷ್ಟು ಮತ್ತು ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ 1ರಷ್ಟು ಹೆಚ್ಚಳ ದಾಖಲಿಸಿದೆ.
ಚಾಲ್ತಿ ಖಾತೆ ಮತ್ತು ಉಳಿತಾಯ ಖಾತೆ (ಸಿಎಎಸ್ಎ) ಮೊತ್ತ 8,832 ಕೋಟಿ ರೂ ಗಳಷ್ಟಾಗಿದ್ದು, ವರ್ಷದಿಂದ ವರ್ಷಕ್ಕೆ ಶೇ 26ರಷ್ಟು ಹೆಚ್ಚಳಗೊಂಡಿದೆ. ನಿರ್ದಿಷ್ಟ ಅವಧಿಯ ರಿಟೇಲ್ ಠೇವಣಿಗಳ ಮೊತ್ತವು 15,914 ಕೋಟಿ ರೂ ಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ ಶೇ 35ರಷ್ಟು ಏರಿಕೆ ದಾಖಲಿಸಿದೆ. 2ನೇ ತ್ರೈಮಾಸಿಕದಲ್ಲಿನ ನಿವ್ವಳ ಬಡ್ಡಿ ವರಮಾನವು 944 ಕೋಟಿ ರೂ ಗಳಷ್ಟಾಗಿದ್ದು, ವರ್ಷದಿಂದ ವರ್ಷಕ್ಕೆ ಶೇ 15ರಷ್ಟು ಹೆಚ್ಚಳ ಸಾಧಿಸಿದೆ.
ಈ ತ್ರೈಮಾಸಿಕದಲ್ಲಿನ ಸಾಲ ನೀಡಿಕೆ ಪ್ರಮಾಣವು 5,376 ಕೋಟಿ ರೂ ಗಳಷ್ಟಾಗಿದ್ದು ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ 2ರಷ್ಟು ಹೆಚ್ಚಳ ದಾಖಲಿಸಿದೆ. ವರ್ಷದಿಂದ ವರ್ಷಕ್ಕೆ ಶೇ 6ರಷ್ಟು ಕಡಿಮೆಯಾಗಿದೆ.
ಮೊದಲ ತ್ರೈಮಾಸಿಕದಲ್ಲಿನ ಶೇ 2.3 ರಷ್ಟು ಒಟ್ಟು ವಸೂಲಾಗದ ಸಾಲಕ್ಕೆ (ಜಿ-ಎನ್ಪಿಎ) ಹೋಲಿಸಿದರೆ 2ನೇ ತ್ರೈಮಾಸಿಕದಲ್ಲಿನ ʼಜಿ-ಎನ್ಪಿಎʼ ಶೇ 2.5ರಷ್ಟು ಮತ್ತು ನಿವ್ವಳ ವಸೂಲಾಗದ ಸಾಲದ ಪ್ರಮಾಣವು (ಎನ್-ಎನ್ಪಿಎ) ಶೇ 0.4 ರಿಂದ ಶೇ 0.6ಕ್ಕೆ ತಲುಪಿದೆ. ಈ ಅವಧಿಯಲ್ಲಿನ ವಜಾ ಮೊತ್ತವು 140 ಕೋಟಿ ರೂ ಗಳಷ್ಟಾಗಿದೆ. ಬ್ಯಾಂಕ್ ಗಳಿಸಿರುವ ನಿವ್ವಳ ಬಡ್ಡಿಯು (ಎನ್ಐಎಂ) ಶೇ 9.2ರಷ್ಟು ಏರಿಕೆ ಕಂಡಿದೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್ ಟಾಟಾ ನೇಮಕ ಅಸಾಧ್ಯ!
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
Mangaluru: ಕರ್ಣಾಟಕ ಬ್ಯಾಂಕ್: 336.07 ಕೋ.ರೂ. ನಿವ್ವಳ ಲಾಭ
Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್
Defamation case; ಸಂಜಯ್ ರಾವತ್ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು
Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.