ಹೆಚ್ಚುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ: ಇಂದು ಮತ್ತೆ 36 ಹೊಸ ಸೋಂಕಿತರು


Team Udayavani, May 9, 2020, 12:58 PM IST

ಹೆಚ್ಚುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ: ಇಂದು ಮತ್ತೆ 36 ಹೊಸ ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶುಕ್ರವಾರ ಒಟ್ಟು 48 ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಶನಿವಾರ ಇದುವರೆಗೆ 36 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ದೃಢವಾಗಿದೆ. ಬೆಂಗಳೂರು ನಗರದಲ್ಲಿ 12, ಉತ್ತರ ಕನ್ನಡ ಜಿಲ್ಲೆಯಲ್ಲಿ ಏಳು, ದಾವಣಗೆರೆಯಲ್ಲಿ ಆರು, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಬೀದರ್ ನಲ್ಲಿ ತಲಾ ಮೂರು, ವಿಜಯಪುರ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದೃಢವಾಗಿದೆ.

ಬೆಂಗಳೂರಿನಲ್ಲಿ ಸೋಂಕಿತ ಸಂಖ್ಯೆ 419ರ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದೆ. ಉಳಿದಂತೆ ಪಿ-449 ಮತ್ತು ಪಿ-454 ಸಂಪರ್ಕದಿಂದ ಸೋಂಕು ತಾಗಿರುವುದು ದೃಢವಾಗಿದೆ.

ದಾವಣಗೆರೆಯಲ್ಲಿ ಮತ್ತೆ ಆರು ಪ್ರಕರಣಗಳು ದೃಢವಾಗಿದೆ. ಸೋಂಕಿತ ಸಂಖ್ಯೆ 651ರ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದ್ದರೆ, ಸೋಂಕಿತ ಸಂಖ್ಯೆ553ರ ದ್ವಿತೀಯ ಸಂಪರ್ಕದಿಂದ ಓರ್ವನಿಗೆ ಸೋಂಕು ತಾಗಿದೆ.

ಸೋಂಕಿತ ಸಂಖ್ಯೆ 578ರ ಸಂಪರ್ಕದಿಂದ ದಕ್ಷಿಣ ಕನ್ನಡದ ಮೂವರಿಗೆ ಸೋಂಕು ತಾಗಿದೆ. ಒಂದೇ ಮನೆಯ ನಾಲ್ವರಿಗೆ ಸೋಂಕು ತಾಗಿದಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸೋಂಕಿತರ ಸಂಖ್ಯೆ ಬೆಳೆಯುತ್ತಿದೆ. ಭಟ್ಕಳದ ಏಳು ಜನರಿಗೆ ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 659ರ ದ್ವಿತೀಯ ಸಂಪರ್ಕದಿಂದ ಒಂದೂವರೆ ವರ್ಷದ ಮಗು ಸೇರಿದಂತೆ ಆರು ಜನರಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 740ರ ಸಂಪರ್ಕದಿಂದ 68 ವರ್ಷದ ವೃದ್ಧರಿಗೆ ಸೋಂಕು ದೃಢವಾಗಿದೆ.

ಬೀದರ್ ನಲ್ಲಿ ಮೂವರಿಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 647 ಮತ್ತು 648ರ ಸಂಪರ್ಕದಿಂದ ಕ್ರಮವಾಗಿ 30 ವರ್ಷದ ಗಂಡು ಮತ್ತು 12 ವರ್ಷದ ಬಾಲಕಿಗೆ ಸೋಂಕು ತಾಗಿದೆ. ಮತ್ತೊಂದು ಸೋಂಕಿತನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ.

ಚಿತ್ರದುರ್ಗದಲ್ಲಿ ಮತ್ತೆ ಮೂವರಿಗೆ ಸೋಂಕು ದೃಢವಾಗಿದ್ದು, ಗುಜರಾತ್ ನ ಅಹಮದಾಬಾದ್ ಗೆ ಪ್ರಯಾಣ ಮಾಡಿದ ಹಿನ್ನೆಲೆಯಳ್ಳ ಮೂವರಿಗೆ ಸೋಂಕು ತಾಗಿರುವುದು ಖಚಿತವಾಗಿದೆ.

ವಿಜಯಪುರದ 11 ವರ್ಷದ ಬಾಲಕಿಗೆ ಸೋಂಕು ತಾಗಿದ್ದರೆ, ತುಮಕೂರಿನ 45 ವರ್ಷದ ಪುರುಷನಿಗೆ ಸೋಂಕು ದೃಢವಾಗಿದೆ.

ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.