ಹರ್ ಘರ್ ಜಲ್ : ಒಂದು ಲಕ್ಷ ಗ್ರಾಮಗಳಲ್ಲಿ ಟ್ಯಾಪ್ ವಾಟರ್ ಸರಬರಾಜು ಕಾರ್ಯ ಪೂರ್ಣ: ಕೇಂದ್ರ   


Team Udayavani, Jul 14, 2021, 8:46 PM IST

1 Lakh Villages Get Tap Water Connections Under Jal Jeevan Mission: Centre

ನವ ದೆಹಲಿ : ಒಂದು ಲಕ್ಷ ಗ್ರಾಮಗಳು ಮತ್ತು 50,000 ಗ್ರಾಮ ಪಂಚಾಯಿತಿಗಳು ಜಲ ಜೀವನ್ ಮಿಷನ್ ಅಡಿಯಲ್ಲಿ ನಲ್ಲಿ ನೀರು ಅಥವಾ ಕೊಳವೆ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ಜಲ ಶಕ್ತಿ ಸಚಿವಾಲಯ ಇಂದು(ಬುಧವಾರ, ಜುಲೈ 14) ತಿಳಿಸಿದೆ.

ಕೋವಿಡ್ -19 ಸೋಂಕು ಹಾಗೂ ಲಾಕ್‌ ಡೌನ್ ಹೊರತಾಗಿಯೂ, ಜಲ ಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಕೇವಲ  23 ತಿಂಗಳ ಅವಧಿಯಲ್ಲಿ  4.49 ಕೋಟಿ ಟ್ಯಾಪ್ ವಾಟರ್ ಸಂಪರ್ಕವನ್ನು ಒದಗಿಸಲಾಗಿದೆ ಮತ್ತು ಈ ಪಂಚಾಯತ್‌ಗಳಲ್ಲಿನ ಪ್ರತಿ ಮನೆಗೂ ಟ್ಯಾಪ್ ನೀರು ಸರಬರಾಜು ಮಾಡುವ ಮೂಲಕ 50,000 ಗ್ರಾಂ ಪಂಚಾಯಿತಿಗಳನ್ನು ‘ಹರ್ ಘರ್ ಜಲ್’ ಎಂಬಂತೆ  ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 2537 ಸೋಂಕಿತರು ಗುಣಮುಖ; 1990 ಹೊಸ ಪ್ರಕರಣ ಪತ್ತೆ 

ಜಲ ಜೀವನ್ ಮಿಷನ್ ಇಂದು ಭಾರತದಾದ್ಯಂತ 1 ಲಕ್ಷ ಹಳ್ಳಿಗಳಲ್ಲಿನ ಪ್ರತಿ ಮನೆಗಳಿಗೆ 23 ತಿಂಗಳ ಅಲ್ಪಾವಧಿಯಲ್ಲಿ ಟ್ಯಾಪ್ ವಾಟರ್ ಸರಬರಾಜು ಮಾಡುವ ಕೆಲಸವನ್ನು ಮಾಡಿದೆ ಎಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15, 2019 ರಂದು ಪ್ರಾರಂಭಿಸಿದ ಜೆಜೆಎಂ(ಜಲ್ ಜೀವನ್ ಮಿಷನ್) ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಟ್ಯಾಪ್ ವಾಟರ್ ಸಂಪರ್ಕವನ್ನು ಒದಗಿಸುವ ಗುರಿ ಹೊಂದಿದೆ. ಈ ಮೆಗಾ ಯೋಜನೆಗಾಗಿ ಕೇಂದ್ರ ಸರ್ಕಾರ 50,000 ಕೋಟಿಗಳನ್ನು ಮೀಸಲಿಟ್ಟಿದೆ.

ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಪ್ರಾರಂಭದಲ್ಲಿ, ದೇಶದ 18.94 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ, ಕೇವಲ 3.23 ಕೋಟಿ (ಶೇಕಡಾ 17) ಮಾತ್ರ ಟ್ಯಾಪ್ ವಾಟರ್  ಸಂಪರ್ಕವನ್ನು ಹೊಂದಿದೆ.

ಟ್ಯಾಪ್ ವಾಟರ್ ಸರಬರಾಜು 7.72 ಕೋಟಿ (ಶೇ 40.77) ಕುಟುಂಬಗಳನ್ನು ತಲುಪಿದೆ. ಗೋವಾ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪುದುಚೇರಿ ಗ್ರಾಮೀಣ ಪ್ರದೇಶಗಳಲ್ಲಿ ಶೇಕಡಾ 100 ರಷ್ಟು ಟ್ಯಾಪ್ ವಾಟರ್ ಸರಬರಾಜನ್ನು ಮಾಡಲಾಗಿದೆ.

“ಪ್ರಸ್ತುತ, 71 ಜಿಲ್ಲೆಗಳು, 824 ಬ್ಲಾಕ್ ಗಳು, 50,309 ಗ್ರಾಮ ಪಂಚಾಯಿತಿಗಳು ಮತ್ತು 1,00,275 ಗ್ರಾಮಗಳು” ಹರ್ ಘರ್ ಜಲ “ಗುರಿಯನ್ನು ಸಾಧಿಸಿವೆ” ಎಂದು ಸಚಿವಾಲಯ ತಿಳಿಸಿದೆ.

ಕಳೆದ 23 ತಿಂಗಳುಗಳಲ್ಲಿ, 117 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಟ್ಯಾಪ್ ವಾಟರ್ ಸರಬರಾಜು ಶೇಕಡಾ 7 ರಿಂದ 33 ಕ್ಕೆ ಏರಿಕೆಯಾಗಿ, ನಾಲ್ಕು ಪಟ್ಟು ಹೆಚ್ಚಾಗಿದೆ.

ಇನ್ನು, ಇದೇ ಮಾದರಿಯಲ್ಲಿ ಜಪಾನಿನಲ್ಲಿಯೂ ಎನ್ಸೆಫಾಲಿಟಿಸ್- ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್ (ಜೆಇ-ಐಇಎಸ್) ಪೀಡಿತ 61 ಜಿಲ್ಲೆಗಳಲ್ಲಿ 97 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಅಲ್ಲಿನ ಸರ್ಕಾರ ಟ್ಯಾಪ್ ವಾಟರ್ ಸರಬರಾಜು ಮಾಡಲಾಗಿದೆ ಎನ್ನುವುದು ವಿಶೇಷ.

ಇದನ್ನೂ ಓದಿ : ಕಡಿಮೆ ಸಮಯದಲ್ಲಿ ಮಲ್ಲಿಗೆ ಹೂವುವನ್ನುಕಟ್ಟುವ ಸರಳ ವಿಧಾನ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.