UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ
Team Udayavani, Oct 14, 2024, 11:26 AM IST
ಉತ್ತರ ಪ್ರದೇಶ: ದುರ್ಗಾ ವಿಸರ್ಜನೆ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಗುಂಡಿನ ದಾಳಿಗೆ ಬಲಿಯಾದ ಘಟನೆ ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಭಾನುವಾರ(ಅ.13) ರಾತ್ರಿ ನಡೆದಿದೆ.
ಮೃತ ಯುವಕನ್ನು ರಾಹುವಾ ಮನ್ಸೂರ್ ಗ್ರಾಮದ ರಾಮ್ ಗೋಪಾಲ್ ಮಿಶ್ರಾ (22) ಎನ್ನಲಾಗಿದೆ.
ಏನಿದು ಘಟನೆ:
ಹಾರ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮೆಹ್ಸಿ ಮಹಾರಾಜ್ಗಂಜ್ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಡಿಜೆ ವಿಚಾರದಲ್ಲಿ ಎರಡು ಗುಂಪಿನ ನಡುವೆ ಮಾತಿಗೆ ಮಾತು ಬೆಳೆದಿದೆ ಬಳಿಕ ಇದು ಹಿಂಸಾತ್ಮಕ ರೂಪಕ್ಕೆ ತಿರುಗಿದೆ ಈ ವೇಳೆ ಒಂದು ಕೋಮಿನ ವ್ಯಕ್ತಿ ರಾಮ್ ಗೋಪಾಲ್ ಮೇಲೆ ಗುಂಡು ಹಾರಿಸಿದ್ದಾನೆ. ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು ಇದರಿಂದ ರೊಚ್ಚಿಗೆದ್ದ ಇನ್ನೊಂದು ಕೋಮಿನ ಜನ ಮಹಾರಾಜ್ಗಂಜ್ ಮಾರುಕಟ್ಟೆಯಲ್ಲಿದ್ದ ಕೆಲವು ವಾಹನಗಳನ್ನು ಧ್ವಂಸಗೊಳಿಸಿದರು ಮತ್ತು ಬೆಂಕಿ ಹಚ್ಚಿದರು.
ವಿಷಯ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಮಾರುಕಟ್ಟೆ ಪ್ರದೇಶವನ್ನು ಕಂಟೋನ್ಮೆಂಟ್ ಪ್ರದೇಶವಾಗಿ ಪರಿವರ್ತಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಐಜಿ ದೇವಿಪಟ್ಟಣ ಅಮರೇಂದ್ರ ಪ್ರಸಾದ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
#WATCH | Bahraich, Uttar Pradesh: Police conducted route march after clashes erupted during Durga idol immersion in Mahasi Maharajganj. (13.10) pic.twitter.com/KOOJQLGIfa
— ANI UP/Uttarakhand (@ANINewsUP) October 14, 2024
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ:
ಈ ಹಿಂಸಾಚಾರದ ನಂತರ, ಪೊಲೀಸ್ ಠಾಣೆಯ ಪ್ರಭಾರಿ ಹಾರ್ದಿ ಮತ್ತು ಹೊರಠಾಣೆ ಪ್ರಭಾರಿ ಮಹ್ಸಿಯನ್ನು ಅಮಾನತುಗೊಳಿಸಲಾಗಿದೆ. ಅದೇ ಸಮಯದಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಹ್ರೈಚ್ನ ಮಹ್ಸಿಯಲ್ಲಿ ವಾತಾವರಣವನ್ನು ಹಾಳು ಮಾಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.
30 ಜನರ ಬಂಧನ :
ಘಟನೆಗೆ ಸಂಬಂಧಿಸಿ ಭರೈಚ್ ಪೊಲೀಸರು ಕನಿಷ್ಠ 30 ಜನರನ್ನು ಬಂಧಿಸಿರುವುದಾಗಿ ಹೇಳಲಾಗಿದೆ ಅಲ್ಲದೆ ರಾಮ್ ಗೋಪಾಲ್ ಮಿಶ್ರಾ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಸಲ್ಮಾನ್ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ
Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ
Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಪಾತಕಿ ಲಾರೆನ್ಸ್ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?
Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!
Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!
Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!
Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.