![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 12, 2022, 8:29 AM IST
ಶಿಯೋಪುರ: ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದ ಶಿಯೋಪುರದಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಚಂಬಲ್ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ ಬಾಲಕನ ಮೇಲೆ ದಾಳಿ ಮಾಡಿದೆ. ಮೊಸಳೆ ಬಾಲಕನನ್ನು ನದಿಗೆ ಎಳೆದೊಯ್ದಿದೆ.
ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಆತನ ಕುಟುಂಬ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ದೊಣ್ಣೆ, ಹಗ್ಗ ಹಾಗೂ ಬಲೆಯಿಂದ ಮೊಸಳೆಯನ್ನು ಹಿಡಿದಿದ್ದಾರೆ. ಅವರು ಮೊಸಳೆಯನ್ನು ನದಿಯಿಂದ ಹೊರಗೆ ಎಳೆದರು.
ಅಷ್ಟರಲ್ಲಿ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ತಲುಪಿ, ಮೊಸಳೆಯನ್ನು ಗ್ರಾಮಸ್ಥರ ಹಿಡಿತದಿಂದ ರಕ್ಷಿಸಲು ಯತ್ನಿಸಿದರು. ಆದರೆ, ಸಂಜೆಯವರೆಗೂ ಬಾಲಕನ ಕುಟುಂಬಸ್ಥರು ಇದಕ್ಕೆ ಒಪ್ಪಿರಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಮಗು ಜೀವಂತವಾಗಿರಬಹುದು. ಮಗುವನ್ನು ಉಗುಳಿದಾಗ ಮಾತ್ರ ಮೊಸಳೆಯನ್ನು ಬಿಡುತ್ತೇವೆ ಎಂದು ಕುಟುಂಬಿಕರು ಹೇಳಿದ್ದರು.
ಇದನ್ನೂ ಓದಿ:ಮಳೆಗೆ ತೊಯ್ದ ಬದುಕು: ಪರಿಹಾರ; ಸಿಎಂ ಅವರತ್ತ ಕರಾವಳಿಗರ ನಿರೀಕ್ಷೆ
“ಬಾಲಕ ಸ್ನಾನ ಮಾಡುವಾಗ ನದಿಯ ಆಳಕ್ಕೆ ಹೋಗಿದ್ದ, ಈ ವೇಳೆ ಮಗುವನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಬಲೆ ಮತ್ತು ಕೋಲುಗಳನ್ನು ಬಳಸಿ ಮೊಸಳೆಯನ್ನು ಹಿಡಿದಿದ್ದಾರೆ” ಎಂದು ರಘುನಾಥಪುರ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ವೀರ್ ಸಿಂಗ್ ತೋಮರ್ ಹೇಳಿದ್ದಾರೆ.
ಬಳಿಕ ಪೊಲೀಸ್ ಅಧಿಕಾರಿಗಳು ಹಾಗೂ ವನ್ಯ ಜೀವಿ ಇಲಾಖೆಯವರು ಮನವೊಲಿಸಿ ಮೊಸಳೆಯನ್ನು ಗ್ರಾಮಸ್ಥರಿಂದ ಬಿಡಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.