![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 11, 2024, 5:57 PM IST
ರಾಂಚಿ: ಲೋಕಸಭೆ ಚುನಾವಣೆಗೆ ಮುನ್ನ, ಗುರುವಾರ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ 12 ಮಂದಿ ಮಾವೋವಾದಿಗಳು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಷ್ಯಾದ ದಟ್ಟವಾದ ಸಾಲ್ ಅರಣ್ಯ ಪ್ರದೇಶವಾದ ಸರಂದಾ ಮತ್ತು ಕೊಲ್ಹಾನ್ನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು.
”ಶರಣಾದವರು ಮಿಸಿರ್ ಬೆಸ್ರಾ ಗುಂಪಿಗೆ ಸೇರಿದವರು, ಅವರ ತಲೆಯ ಮೇಲೆ ಒಂದು ಕೋಟಿ ರೂಪಾಯಿ ಇನಾಮು ಇತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಪಶ್ಚಿಮ ಸಿಂಗ್ಭೂಮ್ ಅನ್ನು ದೇಶದ ಅತ್ಯಂತ ಎಡಪಂಥೀಯ ಉಗ್ರಗಾಮಿ-ಪೀಡಿತ ಜಿಲ್ಲೆಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, 46 ಮಾವೋವಾದಿ ಸಂಬಂಧಿತ ಘಟನೆಗಳಿಗೆ ಸಾಕ್ಷಿಯಾಗಿತ್ತು, ಇದರ ಪರಿಣಾಮವಾಗಿ ಕಳೆದ ವರ್ಷ 22 ಸಾವುಗಳು ಸಂಭವಿಸಿದ್ದವು.
ಮೇ 13 ರಂದು ಜಾರ್ಖಂಡ್ನ ಸಿಂಗ್ಭೂಮ್ ಲೋಕಸಭಾ ಕ್ಷೇತ್ರದ ನಕ್ಸಲ್ ಪೀಡಿತ ಪ್ರದೇಶದ ಹಲವು ಪ್ರದೇಶಗಳು ಮೊದಲ ಬಾರಿಗೆ ದಶಕಗಳ ನಂತರ ಮತದಾನಕ್ಕೆ ಸಾಕ್ಷಿಯಾಗಲಿವೆ. ಸರಂಡಾದಲ್ಲಿ ವಾಸಿಸುವ ಜನರು ತಮ್ಮ ಹಕ್ಕು ಚಲಾಯಿಸಲು ಅನುವು ಮಾಡಿಕೊಡಲು ಪೋಲಿಂಗ್ ತಂಡಗಳು ಮತ್ತು ಸಾಮಗ್ರಿಗಳನ್ನು ಹೆಲಿಕಾಪ್ಟರ್ಗಳಿಂದ ಇಳಿಸಲಾಗುತ್ತದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.