Delhi; ಸರಕಾರದ ಶೆಲ್ಟರ್ ಹೋಮ್‌ನಲ್ಲಿ 20 ದಿನಗಳಲ್ಲಿ 14 ಮಂದಿ ನಿಗೂಢ ಸಾವು !!

ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಮತ್ತೊಂದು ರಾಜಕೀಯ ಸಮರ

Team Udayavani, Aug 2, 2024, 6:04 PM IST

1-delhi

ಹೊಸದಿಲ್ಲಿ : ದೆಹಲಿ ಸರ್ಕಾರ ನಡೆಸುತ್ತಿರುವ ವಿಶೇಷಚೇತನರ ಆಶ್ರಯಧಾಮದಲ್ಲಿ 14 ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ತಿಳಿದುಬಂದಿದೆ.ರೋಹಿಣಿಯಲ್ಲಿರುವ ‘ಆಶಾ ಕಿರಣ್’ ಆಶ್ರಯ ಮನೆಯಲ್ಲಿ ಜನವರಿಯಿಂದ 27 ಸಾವುಗಳು ವರದಿಯಾಗಿವೆ. ನಿರ್ಲಕ್ಷ್ಯ ಮತ್ತು ಕಳಪೆ ನಿರ್ವಹಣೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದ್ದು ಇನ್ನೊಂದು ರಾಜಕೀಯ ಸಮರಕ್ಕೆ ಕಾರಣವಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಕ, ಉಳಿದ 13 ಮಂದಿ 20 ವರ್ಷಕ್ಕಿಂತ ಮೇಲ್ಪಟ್ಟವರು. ಜುಲೈ 15 ಮತ್ತು 31 ರ ನಡುವೆ 13 ಮಂದಿ ಸಾವನ್ನಪ್ಪಿದ್ದು, 8 ಮಹಿಳೆಯರು ಮತ್ತು 5 ಪುರುಷರು ಸೇರಿದ್ದಾರೆ ಜುಲೈ 1 ಮತ್ತು 15 ರ ನಡುವೆ ಒಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.

ಆಶಾಕಿರಣ್ ಆಶ್ರಯ ಮನೆಯಲ್ಲಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವಿನ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚು ಎಂದು ಗಮನಿಸಿದ SDM, ಮರಣೋತ್ತರ ಪರೀಕ್ಷೆಯ ವರದಿಗಳ ನಂತರ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ. SDM ವರದಿಯು ಕೈದಿಗಳಿಗೆ ನೀಡುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಷ್ಟ್ರೀಯ ಮಹಿಳಾ ಆಯೋಗ (NCW) ನಿರ್ಲಕ್ಷ್ಯಕ್ಕಾಗಿ ಆಮ್ ಆದ್ಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಸತ್ಯಶೋಧನಾ ತಂಡವನ್ನು ಶೆಲ್ಟರ್ ಹೋಮ್‌ ಗೆ ಕಳುಹಿಸಿದ್ದಾರೆ.

ದೆಹಲಿ ಸರ್ಕಾರ ನಡೆಸುತ್ತಿರುವ ಆಶಾ ಕಿರಣ್ ಆಶ್ರಯ ಮನೆ ಎಲ್ಲರ ಭರವಸೆ ಕಳೆದುಕೊಂಡಿದ್ದು ಜನರು ಅದರಲ್ಲಿ ನರಳುತ್ತಿದ್ದಾರೆ ಮತ್ತು ಸಾಯುತ್ತಿದ್ದಾರೆ. ದೆಹಲಿ ಸರ್ಕಾರವು ಏನನ್ನೂ ಮಾಡುತ್ತಿಲ್ಲ, ವಿಚಾರಣೆಗೆ ನಮ್ಮ ತಂಡವನ್ನು ಕಳುಹಿಸಲಾಗಿದೆ” ಎಂದು NCW ಅಧ್ಯಕ್ಷೆ ರೇಖಾ ಶರ್ಮ ಹೇಳಿದ್ದಾರೆ.

ದೆಹಲಿ ಸಚಿವೆ ಅತಿಶಿ, ಸಾವಿನ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲು ಮತ್ತು 48 ಗಂಟೆಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಜನವರಿ 2024 ರಿಂದ ಆಶ್ರಯ ಮನೆಯಲ್ಲಿ 14 ಸಾವುಗಳು ಸಂಭವಿಸಿವೆ ಎಂದು ಅತಿಶಿ ಹೇಳಿದ್ದಾರೆ.

ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಸಚಿವೆ ಕೋರಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ನಿರ್ಲಕ್ಷ್ಯದಿಂದ ಯಾವುದೇ ಸಾವು ಸಂಭವಿಸಿದ್ದರೆ, ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡುತ್ತೇನೆ.ನಾವು ಮರಣೋತ್ತರ ಪರೀಕ್ಷೆಗಳ ವರದಿಗಾಗಿ ಕಾಯುತ್ತಿದ್ದೇವೆ ಮತ್ತು 24 ಗಂಟೆಗಳ ನಂತರ ಮ್ಯಾಜಿಸ್ಟ್ರಿಯಲ್ ವಿಚಾರಣೆಯ ಪ್ರಾಥಮಿಕ ವರದಿ ಹೊರಬರುತ್ತದೆ ಎಂದು ಸಚಿವೆ ಹೇಳಿದ್ದಾರೆ.

BJP VS AAP

ಪರಿಸ್ಥಿತಿ ಅವಲೋಕಿಸಲು ದೆಹಲಿ ಬಿಜೆಪಿಯ ತಂಡದು ಆಶಾ ಕಿರಣ್ ಆಶ್ರಯ ಮನೆಗೆ ತೆರಳಿದೆ. ನಮ್ಮ ಮಾಹಿತಿಯಂತೆ ನಿರಾಶ್ರಿತರಿಗೆ ಗಲೀಜು ನೀರು ಬರುತ್ತಿದೆ, ಊಟ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಈ ಬಗ್ಗೆ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ ಗುಪ್ತಾ ಹೇಳಿಕೆ ನೀಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಸಚಿವ ಗೋಪಾಲ್ ರಾಯ್, ಮಯೂರ್ ವಿಹಾರ್‌ನ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ತಾಯಿ ಮತ್ತು ಮಗನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

modi (4)

MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.