Ranthambore: ಹುಲಿ ಸಂರಕ್ಷಿತ ಪ್ರದೇಶಕ್ಕೆ ಅಕ್ರಮ ಪ್ರವೇಶ… 19 ಐಷಾರಾಮಿ ವಾಹನಗಳು ವಶಕ್ಕೆ
Team Udayavani, Aug 18, 2024, 9:04 AM IST
ಜೈಪುರ: ನಿರ್ಬಂಧಿತ ಹುಲಿ ಸಂರಕ್ಷಿತ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹತ್ತೊಂಬತ್ತು ವಾಹನವಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ.
ಈ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ. ಮಳೆಗಾಲದ ಕಾರಣ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿಯನ್ನು ರದ್ದುಗೊಳಿಸಲಾಗಿದೆ. ಆದರೆ ಆಗಸ್ಟ್ 15 ರಂದು ಹಲವು ಐಷಾರಾಮಿ ವಾಹನಗಳಲ್ಲಿ ಬಂದ ತಂಡ ನೇರವಾಗಿ ನಿರ್ಬಂಧಿತ ಹುಲಿ ಸಂರಕ್ಷಿತ ಪ್ರದೇಶವನ್ನು ಪ್ರವೇಶಿಸಿದ್ದಾರೆ. ಅಲ್ಲದೆ ನಿರ್ಬಂಧ ವಿಧಿಸಿರುವುದು ಪ್ರವಾಸಿಗರಿಗೆ ಗೊತ್ತಿರುವ ವಿಚಾರ ಆದರೂ ಅರಣ್ಯ ಇಲಾಖೆಯ ಮಾತಿಗೆ ಬೆಲೆ ಕೊಡದೆ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವೇಶ ಮಾಡಿದ್ದಾರೆ ಈ ಕುರಿತು ವಿಚಾರ ಗೊತ್ತಾಗುತ್ತಿದ್ದಂತೆ ಅರಣ್ಯ ಅಧಿಕಾರಿಗಳ ತಂಡ ನಿಷೇಧಿತ ಪ್ರದೇಶಕ್ಕೆ ತೆರಳಿ ಅಲ್ಲಿದ್ದ ಸುಮಾರು ಹತ್ತೊಂಬತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರುತು ಮಾಹಿತಿ ನೀಡಿದ ಅಧಿಕಾರಿಗಳು, ನಿಷೇಧಿತ ಹುಲಿ ಸಂರಕ್ಷಿತ ಪ್ರದೇಶಕ್ಕೆಅಕ್ರಮವಾಗಿ ಪ್ರವೇಶಿಸಿದ ತಂಡ ಅಲ್ಲಿನ ಕೆಲ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿದ್ದೂ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ ಈ ವಿಚಾರ ನಮ್ಮ ಗಮನಕ್ಕೆ ಬರುತ್ತಿದ್ದಂತೆ ಕಾರ್ಯಪ್ರವೃತ್ತರಾದ ನಮ್ಮ ತಂಡ ರಣಥಂಬೋರ್ ರಾಷ್ಟ್ರೀಯ ಉದ್ಯಾನ ವಲಯ ಪ್ರವೇಶಿಸಿ ಅಲ್ಲಿದ್ದ 14 ವಾಹನಗಳನ್ನು ವಶಕ್ಕೆ ಅಡೆದುಕೊಂಡಿತು ಇದಾದ ಬಳಿಕ ಇದೆ ತಂಡಕ್ಕೆ ಸಂಬಂದಿಸಿದ ಇತರ ಐದು ವಾಹನಗಳನ್ನು ಹತ್ತಿರದ ಹೋಟೆಲ್ ಬಳಿ ವಶಕ್ಕೆ ಪಡೆದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ವಶಪಡಿಸಿಕೊಂಡ ಐಷಾರಾಮಿ ವಾಹನಗಳು ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ನಂಬರ್ ಪ್ಲೇಟ್ಗಳನ್ನು ಹೊಂದಿವೆ ಎಂದು ವಿಭಾಗೀಯ ಅರಣ್ಯಾಧಿಕಾರಿ ರಮಾನಂದ್ ಭಾಕರ್ ತಿಳಿಸಿದ್ದಾರೆ. ಬಿಗಿಯಾದ ಕಣ್ಗಾವಲು ಹೊರತಾಗಿಯೂ ಪ್ರವಾಸಿಗರು ನಿರ್ಬಂಧಿತ ಪ್ರದೇಶಕ್ಕೆ ಹೇಗೆ ಪ್ರವೇಶಿಸಿದರು ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
Over 10 vehicles were seized after an adventure drive organized by the official Mahindra team in Tiger Zone 8 of Ranthambore.
The forest department is now pursuing legal action against Mahindra Adventure officials.
It’s alarming that such an event could occur under the watch… pic.twitter.com/f24Kki1vl3
— Rattan Dhillon (@ShivrattanDhil1) August 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.