Ayodhya Ram temple, ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ; ಇಬ್ಬರ ಬಂಧನ
Team Udayavani, Jan 4, 2024, 10:32 AM IST
ಲಕ್ನೋ: ಉದ್ಘಾಟನೆಗೆ ಸಿದ್ಧವಾಗಿರುವ ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ದಾಳಿ ಮೂಲಕ ಹತ್ಯೆಗೈಯುವ ಬೆದರಿಕೆಯ ಇ-ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಂಡವು ಬುಧವಾರ ರಾತ್ರಿ(ಜ.3 ರಂದು) ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಗೊಂಡಾ ಮೂಲದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಎರಡು ಮೊಬೈಲ್, ಮೇಲ್ ಐಡಿ, ಎರಡು ವೈ-ಫೈ ರೂಟರ್ ಮತ್ತು ಸಿಸಿಟಿವಿ ಡಿವಿಆರ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಆಗಿದ್ದೇನು?: ಕೆಲ ಸಮಯದ ಹಿಂದೆ ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಬೆದರಿಕೆ ಮೇಲ್ ಬಂದಿತ್ತು. ಇದರಲ್ಲಿ ಎಸ್ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಹಾಗೂ ರಾಮ ಮಂದಿರ, ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿತ್ತು. ‘@iDevendraOffice’ ಟ್ವಿಟರ್ ಖಾತೆಯ ಪೋಸ್ಟ್ ನಲ್ಲಿ ಬೆದರಿಕೆ ಹಾಕಿದ್ದರು.
ಬೆದರಿಕೆ ಪೋಸ್ಟ್ಗಳನ್ನು ಕಳುಹಿಸಲು ‘[email protected]’ ಮತ್ತು ‘[email protected]’ ಇಮೇಲ್ ಐಡಿಗಳನ್ನು ಬಳಸಲಾಗಿದೆ ಎಂದು ಆರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಎಸ್ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದು, ಓಂ ಪ್ರಕಾಶ್ ಇಮೇಲ್ ಕಳುಹಿಸಿದ್ದರು. ಇಬ್ಬರು ತಿವಾರಿ ಅವರ ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೌ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಅವರ ಸೂಚನೆಯ ಮೇರೆಗೆ ನಾವು ನಕಲಿ ಐಡಿಗಳನ್ನು ಬಳಸಿ ಬೆದರಿಕೆಯ ಇಮೇಲ್ ಗಳನ್ನು ಕಳುಹಿಸುವ ಕೆಲಸವನ್ನು ಮಾಡುತ್ತಿದ್ದೆವು ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಮಾಧ್ಯಮದ ಗಮನ ಮತ್ತು ರಾಜಕೀಯವಾಗಿ ಬೆಳೆಯಲು ಎಕ್ಸ್ ಖಾತೆಯ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಅವರು ಈ ರೀತಿ ಮಾಡುತ್ತಿದ್ದರು ಎಂದು ಆರೋಪಿಗಳು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಮೇಲ್ಗಳನ್ನು ಕಳುಹಿಸಿದ ನಂತರ, ತಿವಾರಿ ಅವರ ಆದೇಶದ ಮೇರೆಗೆ ಬಳಸಿದ ಮೊಬೈಲ್ ಫೋನ್ಗಳನ್ನು ನಾಶಪಡಿಸಲು ಹೇಳಿದ್ದರು.ಕೃತ್ಯಕ್ಕೆ ಇಂಟರ್ನೆಟ್ ಗಾಗಿ ಕಚೇರಿ ವೈ-ಫೈ ನ್ನು ಬಳಸಲಾಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.