Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ
Team Udayavani, Oct 19, 2024, 12:57 PM IST
ಛತ್ತೀಸ್ಗಢ: ತಾಯಿ ಮಕ್ಕಳು ಸೇರಿದಂತೆ ಮನೆಯ ಆರು ಮಂದಿ ಅನ್ನ, ನೀರು ಬಿಟ್ಟು ನಿರಂತರ ಪೂಜೆಯಲ್ಲಿ ಮಗ್ನರಾಗಿದ್ದ ಮನೆಮಂದಿಯಲ್ಲಿ ಇಬ್ಬರು ಸಹೋದರರು ನಿಗೂಢವಾಗಿ ಮೃತಪಟ್ಟಿದ್ದು ಉಳಿದ ನಾಲ್ವರ ಸ್ಥಿತಿ ಚಿಂತಾಜನವಾಗಿರುವ ಘಟನೆಯೊಂದು ಛತ್ತೀಸ್ಗಢದ ಸಕ್ತಿ ಜಿಲ್ಲೆಯಲ್ಲಿ ಶುಕ್ರವಾರ(ಅ.18) ರಂದು ಬೆಳಕಿಗೆ ಬಂದಿದೆ.
ಮೃತ ಸಹೋದರರನ್ನು ವಿಕಾಸ್ ಗೊಂಡ್ (25) ಮತ್ತು ವಿಕ್ಕಿ ಗೊಂಡ್ (22) ಎನ್ನಲಾಗಿದ್ದು ತಾಯಿ, ಇಬ್ಬರು ಸಹೋದರಿಯರು ಹಾಗೂ ಇನ್ನೋರ್ವ ಸಹೋದರ ಸೇರಿದಂತೆ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಏನಿದು ಪ್ರಕರಣ:
ಛತ್ತೀಸ್ಗಢ ಸಕ್ತಿ ಜಿಲ್ಲೆಯ ತಂಡುಲ್ದಿಹ್ ಗ್ರಾಮದ ಮನೆಯೊಂದರಲ್ಲಿ, ಫಿರಿತ್ ಬಾಯಿ ಎಂಬ ಮಹಿಳೆ ತನ್ನ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಉಜ್ಜಯಿನಿಯ ಬಾಬಾ ಒಬ್ಬರ ಫೋಟೋ ಇರಿಸಿಕೊಂಡು ನಿರಂತರ ಪೂಜೆಗಳನ್ನು ನಡೆಸುತಿದ್ದರು ಎನ್ನಲಾಗಿದೆ ಮೊದ ಮೊದಲು ನೆರೆಹೊರೆಯವರಿಗೆ ಇವರ ಅರಿವೇ ಇರಲಿಲ್ಲ ಆದರೆ ಐದು ಆರು ದಿನಗಳು ಕಳೆದಂತೆ ಮನೆಮಂದಿ ಹೊರಗೆ ಕಾಣದೇ ಇದ್ದಾಗ ಅನುಮಾನಗೊಂಡಿದ್ದಾರೆ ಅಲ್ಲದೆ ಕೆಲವೊಮ್ಮೆ ಮನೆಯ ಒಳಗಿನಿಂದ ಜೈ ಬಾಬಾ ಎಂಬ ಘೋಷಣೆಗಳು ಕೇಳುತಿತ್ತು ಇದರಿಂದ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನೆರೆಹೊರೆಯವರ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಬಡಿದಿದ್ದಾರೆ ಆದರೆ ಮನೆಮಂದಿ ಬಾಗಿಲು ತೆರೆಯಲಿಲ್ಲ ಇದರಿಂದ ಅನುಮಾನಗೊಂಡ ಪೊಲೀಸರು ಬಾಗಿಲು ಮುರಿದು ಒಳ ಹೋಗಿದ್ದಾರೆ ಆಗ ಇಬ್ಬರು ಸಹೋದರರು ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದರು ಜೊತೆಗೆ ಇತರ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದರು ಅಲ್ಲದೆ ಮನೆಯ ಒಳಗೆ ಬಾಬಾ ಒಬ್ಬರ ಫೋಟೋ ಅಲ್ಲಲ್ಲಿ ಕಂಡು ಬಂದಿತ್ತು ಯಾವುದೋ ಪೂಜೆ ನಡೆಸುತ್ತಿದ್ದರು ಎನ್ನಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಅಲ್ಲದೆ ಆರು ಮಂದಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಅದರಲ್ಲಿ ಇಬ್ಬರು ಸಹೋದರರು ಮೃತಪಟ್ಟಿದ್ದು, ನಾಲ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಮಾಹಿತಿ ನೀಡಿದ ವೈದ್ಯರು ಮನೆಮಂದಿ ಯಾವುದೋ ಮೂಢನಂಬಿಕೆಗೆ ಒಳಗಾಗಿ ಅನ್ನ, ನೀರು ಬಿಟ್ಟು ಧ್ಯಾನಕ್ಕೆ ಒಳಗಾಗಿದ್ದಾರೆ ಸುಮಾರು ಏಳು ದಿನಗಳು ಹೊಟ್ಟೆಗೆ ಒಂದು ತೊಟ್ಟು ನೀರೂ ಸೇವಿಸದೇ ಧ್ಯಾನದಲ್ಲಿ ಮುಳುಗಿದ್ದಾರೆ ಹಾಗಾಗಿ ಅನಾರೋಗ್ಯಕ್ಕೆ ಒಳಗಾಗಿ ಇಬ್ಬರು ಮೃತಪಟ್ಟರೆ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದು ವರದಿ ಬಂದ ಬಳಿಕ ಹೆಚ್ಚಿನ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್ಜೆಡಿ ಶಾಸಕ ಅರೆಸ್ಟ್
Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್
BRICS Meet: ಅ.22ಕ್ಕೆ ಬ್ರಿಕ್ಸ್ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ
Safe: ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ರಕ್ಷಿಸಿದ ಬೆಂಗಳೂರು ಚಾರಣಿಗ
JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್ ಸಂಪುಟ ಸಭೆ ನಿರ್ಣಯ
MUST WATCH
ಹೊಸ ಸೇರ್ಪಡೆ
Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
Bengaluru: ಸಾಕ್ಷಿದಾರರಿಗೆ ಜೈಲಿನಿಂದ ಬೆದರಿಕೆ: ಜೈಲು ಅಧೀಕ್ಷಕರ ವಿರುದ್ದ ತನಿಖೆ
Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ
Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ
ಯಕ್ಷಧ್ರುವ ಯುರೋಪ್ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.