Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ


Team Udayavani, Oct 19, 2024, 12:57 PM IST

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

ಛತ್ತೀಸ್‌ಗಢ: ತಾಯಿ ಮಕ್ಕಳು ಸೇರಿದಂತೆ ಮನೆಯ ಆರು ಮಂದಿ ಅನ್ನ, ನೀರು ಬಿಟ್ಟು ನಿರಂತರ ಪೂಜೆಯಲ್ಲಿ ಮಗ್ನರಾಗಿದ್ದ ಮನೆಮಂದಿಯಲ್ಲಿ ಇಬ್ಬರು ಸಹೋದರರು ನಿಗೂಢವಾಗಿ ಮೃತಪಟ್ಟಿದ್ದು ಉಳಿದ ನಾಲ್ವರ ಸ್ಥಿತಿ ಚಿಂತಾಜನವಾಗಿರುವ ಘಟನೆಯೊಂದು ಛತ್ತೀಸ್‌ಗಢದ ಸಕ್ತಿ ಜಿಲ್ಲೆಯಲ್ಲಿ ಶುಕ್ರವಾರ(ಅ.18) ರಂದು ಬೆಳಕಿಗೆ ಬಂದಿದೆ.

ಮೃತ ಸಹೋದರರನ್ನು ವಿಕಾಸ್ ಗೊಂಡ್ (25) ಮತ್ತು ವಿಕ್ಕಿ ಗೊಂಡ್ (22) ಎನ್ನಲಾಗಿದ್ದು ತಾಯಿ, ಇಬ್ಬರು ಸಹೋದರಿಯರು ಹಾಗೂ ಇನ್ನೋರ್ವ ಸಹೋದರ ಸೇರಿದಂತೆ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಏನಿದು ಪ್ರಕರಣ:
ಛತ್ತೀಸ್‌ಗಢ ಸಕ್ತಿ ಜಿಲ್ಲೆಯ ತಂಡುಲ್ದಿಹ್ ಗ್ರಾಮದ ಮನೆಯೊಂದರಲ್ಲಿ, ಫಿರಿತ್ ಬಾಯಿ ಎಂಬ ಮಹಿಳೆ ತನ್ನ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಉಜ್ಜಯಿನಿಯ ಬಾಬಾ ಒಬ್ಬರ ಫೋಟೋ ಇರಿಸಿಕೊಂಡು ನಿರಂತರ ಪೂಜೆಗಳನ್ನು ನಡೆಸುತಿದ್ದರು ಎನ್ನಲಾಗಿದೆ ಮೊದ ಮೊದಲು ನೆರೆಹೊರೆಯವರಿಗೆ ಇವರ ಅರಿವೇ ಇರಲಿಲ್ಲ ಆದರೆ ಐದು ಆರು ದಿನಗಳು ಕಳೆದಂತೆ ಮನೆಮಂದಿ ಹೊರಗೆ ಕಾಣದೇ ಇದ್ದಾಗ ಅನುಮಾನಗೊಂಡಿದ್ದಾರೆ ಅಲ್ಲದೆ ಕೆಲವೊಮ್ಮೆ ಮನೆಯ ಒಳಗಿನಿಂದ ಜೈ ಬಾಬಾ ಎಂಬ ಘೋಷಣೆಗಳು ಕೇಳುತಿತ್ತು ಇದರಿಂದ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನೆರೆಹೊರೆಯವರ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಬಡಿದಿದ್ದಾರೆ ಆದರೆ ಮನೆಮಂದಿ ಬಾಗಿಲು ತೆರೆಯಲಿಲ್ಲ ಇದರಿಂದ ಅನುಮಾನಗೊಂಡ ಪೊಲೀಸರು ಬಾಗಿಲು ಮುರಿದು ಒಳ ಹೋಗಿದ್ದಾರೆ ಆಗ ಇಬ್ಬರು ಸಹೋದರರು ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದರು ಜೊತೆಗೆ ಇತರ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದರು ಅಲ್ಲದೆ ಮನೆಯ ಒಳಗೆ ಬಾಬಾ ಒಬ್ಬರ ಫೋಟೋ ಅಲ್ಲಲ್ಲಿ ಕಂಡು ಬಂದಿತ್ತು ಯಾವುದೋ ಪೂಜೆ ನಡೆಸುತ್ತಿದ್ದರು ಎನ್ನಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಅಲ್ಲದೆ ಆರು ಮಂದಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಅದರಲ್ಲಿ ಇಬ್ಬರು ಸಹೋದರರು ಮೃತಪಟ್ಟಿದ್ದು, ನಾಲ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಮಾಹಿತಿ ನೀಡಿದ ವೈದ್ಯರು ಮನೆಮಂದಿ ಯಾವುದೋ ಮೂಢನಂಬಿಕೆಗೆ ಒಳಗಾಗಿ ಅನ್ನ, ನೀರು ಬಿಟ್ಟು ಧ್ಯಾನಕ್ಕೆ ಒಳಗಾಗಿದ್ದಾರೆ ಸುಮಾರು ಏಳು ದಿನಗಳು ಹೊಟ್ಟೆಗೆ ಒಂದು ತೊಟ್ಟು ನೀರೂ ಸೇವಿಸದೇ ಧ್ಯಾನದಲ್ಲಿ ಮುಳುಗಿದ್ದಾರೆ ಹಾಗಾಗಿ ಅನಾರೋಗ್ಯಕ್ಕೆ ಒಳಗಾಗಿ ಇಬ್ಬರು ಮೃತಪಟ್ಟರೆ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದು ವರದಿ ಬಂದ ಬಳಿಕ ಹೆಚ್ಚಿನ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್

ಟಾಪ್ ನ್ಯೂಸ್

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Chief-EC

Safe: ಮುಖ್ಯ ಚುನಾವಣ ಆಯುಕ್ತ ರಾಜೀವ್‌ ಕುಮಾರ್‌ ರಕ್ಷಿಸಿದ ಬೆಂಗಳೂರು ಚಾರಣಿಗ

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

15-bng

Bengaluru: ಸಾಕ್ಷಿದಾರರಿಗೆ ಜೈಲಿನಿಂದ ಬೆದರಿಕೆ: ಜೈಲು ಅಧೀಕ್ಷಕರ ವಿರುದ್ದ ತನಿಖೆ

14-yellapur

Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ಯಕ್ಷಧ್ರುವ ಯುರೋಪ್‌ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ

ಯಕ್ಷಧ್ರುವ ಯುರೋಪ್‌ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.