![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 4, 2023, 5:34 PM IST
ಛತ್ತೀಸ್ಗಢ: ಮದುವೆಗೆ ಉಡುಗೊರೆಯಾಗಿ ನೀಡಿದ್ದ ಹೋಮ್ ಥಿಯೇಟರ್ ಸ್ಪೋಟಗೊಂಡು ನವ ವಿವಾಹಿತ ಹಾಗೂ ಆತನ ಸಹೋದರ ಸೇರಿ ಇಬ್ಬರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಛತ್ತೀಸ್ಗಢದ ಕಬೀರಧಾಮ್ ಜಿಲ್ಲೆಯಲ್ಲಿ ಸಂಭವಿಸಿದೆ.
ಹೇಮೇಂದ್ರ ಮೆರಾವಿ (22) ಹಾಗೂ ಸಹೋದರ ರಾಜ್ ಕುಮಾರ್(30) ಮೃತ ದುರ್ದೈವಿಗಳು.
ಎಪ್ರಿಲ್ 1 ನೇ ತಾರೀಖಿನಂದು ಹೇಮೇಂದ್ರ ಮೆರಾವಿ ಅವರ ವಿವಾಹವಾಗಿದ್ದು ಈ ವೇಳೆ ಸಾಕಷ್ಟು ಉಡುಗೊರೆಗಳು ಬಂದಿದ್ದು ಮದುವೆಯ ಕಾರ್ಯಕ್ರಮಗಳು ಮುಗಿದ ಬಳಿಕ ಅಂದರೆ ಸೋಮವಾರ ಮನೆಮಂದಿ ಸೇರಿಕೊಂಡು ಮದುವೆಗೆ ಬಂದಿರುವ ಉಡುಗೊರೆಗಳನ್ನು ಪರಿಶೀಲಿಸುತ್ತಿದ್ದ ವೇಳೆ ಉಡುಗೊರೆಯಾಗಿ ಹೋಮ್ ಥಿಯೇಟರ್ ಕೂಡಾ ಬಂದಿತ್ತು. ಮದುಮಗ ಹಾಗೂ ಆತನ ಸಹೋದರ ಸೇರಿ ಹೋಮ್ ಥಿಯೇಟರ್ ನ ವಯರ್ ಸೆಟ್ ಮಾಡಿ ಪ್ಲಗ್ ಸ್ವಿಚ್ ಹಾಕಿದ ಕೂಡಲೆ ಹೋಮ್ ಥಿಯೇಟರ್ ಸ್ಪೋಟಗೊಂಡಿದೆ ಈ ವೇಳೆ ಹೇಮೇಂದ್ರ ಮೆರಾವಿ ಸ್ಥಳದಲ್ಲೇ ಮೃತಪಟ್ಟರೆ ಸಹೋದರ ಸೇರಿ ಐದು ಮಂದಿ ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಹೋದರ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಉಳಿದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಹೋಮ್ ಥಿಯೇಟರ್ ಸಿಡಿದ ತೀವ್ರತೆಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಕಬೀರಧಾಮ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮನೀಶಾ ಠಾಕೂರ್ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. ಅಲ್ಲದೆ ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ ಎಲ್ಲ ರೀತಿಯಲ್ಲೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: 5 ವರ್ಷದ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ: 14 ಮಂದಿ ದೋಷಿ
You seem to have an Ad Blocker on.
To continue reading, please turn it off or whitelist Udayavani.