ತೀವ್ರ ವಿರೋಧದ ನಡುವೆ ಕೃಷಿಗೆ ಸಂಬಂಧಿಸಿದ 2 ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ
Team Udayavani, Sep 20, 2020, 3:25 PM IST
ನವದೆಹಲಿ: ತೀವ್ರ ವಿರೋಧದ ನಡುವೆಯೂ ಕೃಷಿಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಧ್ವನಿ ಮತದ ಮೂಲಕ ರಾಜ್ಯಸಭೆಯಲ್ಲಿ ಅಂಗಿಕರಿಸಲಾಗಿದೆ.
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಗಳಿಗೆ ಅಂಗಿಕಾರವನ್ನು ಪಡೆಯಲು ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.
ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ, ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿದವು, ಪ್ರತಿಭಟನೆಯ ನಡುವೆಯೇ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಾತ್ರವಲ್ಲದೆ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ.
ಇದನ್ನೂ ಓದಿ:ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !
ಧ್ವನಿ ಮತದ ವೇಳೆ, ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಧಾವಿಸಿ ನಿಯಮ ಪುಸ್ತಕ ಹರಿದು ಹಾಕಿದ್ದಾರೆ. ಮಾತ್ರವಲ್ಲದೆ ಉಪಸಭಾಧ್ಯಕ್ಷರ ಮೈಕ್ರೋಫೋನ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಇದರಿಂದ ಚರ್ಚೆಯೂ ಗೊಂದಲದಲ್ಲಿ 10 ನಿಮಿಷಗಳ ಕಾಲ ಮುಂದೂಡಿಕೆಯಾಗಿತ್ತು. ನಂತರ ಸದನ ಆರಂಭಗೊಂಡಾಗ ಧ್ವನಿ ಮತದ ಮೂಲಕ ಕೃಷಿ ಮಸೂದೆಗೆ ಅಂಗೀಕಾರ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.