![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 21, 2023, 8:19 PM IST
ತಿರುವನಂತಪುರ:ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ(ವಿಎಸ್ಎಸ್ಸಿ)ಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಕ್ಕಾಗಿ ಇಸ್ರೋ ಆಯೋಜಿಸಿದ್ದ ಪರೀಕ್ಷೆಯಲ್ಲಿ ವಂಚನೆ ಎಸಗಿದ ಹರ್ಯಾಣದ ಇಬ್ಬರನ್ನು ಕೇರಳದ ತಿರುವನಂತಪುರದಲ್ಲಿ ಬಂಧಿಸಲಾಗಿದೆ.
ಪರೀಕ್ಷೆಗೆ ಉತ್ತರ ಬರೆಯುವ ವೇಳೆ ಅಕ್ರಮವೆಸಗಿದ ಆರೋಪದ ಮೇರೆಗೆ ಎರಡು ಪ್ರತ್ಯೇಕ ಪರೀಕ್ಷಾ ಕೇಂದ್ರಗಳಿಂದ ಇವರಿಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಲ್ಲದೆ, ನೈಜ ಪರೀಕ್ಷಾರ್ಥಿಗಳ ಬದಲಿಗೆ ಇವರಿಬ್ಬರೂ ಪರೀಕ್ಷೆ ಬರೆಯುತ್ತಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಅಕ್ರಮ ಹಿನ್ನೆಲೆಯಲ್ಲಿ ಉತ್ತರ ಭಾರತದ ಇನ್ನೂ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಈ ಬೆಳವಣಿಗೆಗಳ ಕುರಿತು ವಿಎಸ್ಎಸ್ಸಿಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಪರೀಕ್ಷೆಯನ್ನು ರದ್ದುಗೊಳಿಸಬೇಕೇ, ಬೇಡವೇ ಎಂಬ ನಿರ್ಧಾರವನ್ನು ಅವರೇ ಕೈಗೊಳ್ಳಲಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ.
ಬಂಧಿತರು ಮೊಬೈಲ್ ಫೋನ್ ಕ್ಯಾಮೆರಾಗಳ ಮೂಲಕ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು, ಮೂರನೇ ವ್ಯಕ್ತಿಗಳಿಗೆ ರವಾನಿಸುತ್ತಿದ್ದರು. ಅವರು ಬ್ಲೂಟೂಥ್ ಮೂಲಕ ಉತ್ತರವನ್ನು ಹೇಳಿಕೊಡುತ್ತಿದ್ದರು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.