![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 24, 2018, 11:10 AM IST
ಶ್ರೀನಗರ : ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಶನಿವಾರ ನಡೆಸಿದ ಎನ್ಕೌಂಟರ್ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಅನಂತನಾಗ್ ಜಿಲ್ಲೆಯ ಡೂರು ಎಂಬಲ್ಲಿ ನಿನ್ನೆ ಶುಕ್ರವಾರ ಎನ್ಕೌಂಟರ್ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಕೂಡ ವಶಪಡಿಸಿಕೊಳ್ಳಲಾಯಿತು.
ತಾಜಾ ವರದಿಗಳ ಪ್ರಕಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಈಗಲೂ ಗುಂಡಿನ ಕಾಳಗ ಸಾಗಿದೆ.
ಈ ತಿಂಗಳ ಆದಿಯಲ್ಲಿ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದಿದ್ದ 48 ತಾಸುಗಳ ಗುಂಡಿನ ಕಾಳಗದಲ್ಲಿ ಐವರು ಉಗ್ರರು ಮತ್ತು ಐವರು ಭದ್ರತಾ ಸಿಬಂದಿಗಳು ಹತರಾಗಿದ್ದರು.
ಶ್ರೀನಗರದಿಂದ 110 ಕಿ.ಮೀ. ದೂರದ ಕುಪ್ವಾರಾದ ಹಲ್ಮತ್ಪೋರಾ ಅರಣ್ಯದಲ್ಲಿ ಮಂಗಳವಾರವೇ ಗುಂಡಿನ ಕಾಳಗ ಆರಂಭವಾಗಿತ್ತು. ಹಲ್ಮತ್ಪೋರಾ ಎಲ್ಓಸಿಯಿಂದ ಕೇವಲ 8 ಕಿ.ಮೀ. ದೂರದಲ್ಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.