ಬೆಳೆಗಳಿಗೆ ಕೀಟನಾಶಕ ಸಿಂಪಡಣೆ: ಮಹಾರಾಷ್ಟ್ರದಲ್ಲಿ 20 ರೈತರ ಸಾವು
Team Udayavani, Oct 9, 2017, 6:30 AM IST
ಮುಂಬಯಿ: ಕಳೆದ ಒಂದು ತಿಂಗಳಲ್ಲಿ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ಬೆಳೆಗಳಿಗೆ ಕೀಟನಾಶಕ ಸಿಂಪಡಣೆ ಮಾಡಿದ 20ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಸುಮಾರು 600 ರೈತರಿಗೆ ಕೀಟನಾಶಕ ಸಿಂಪಡಣೆಯಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ. ದೃಷ್ಟಿ ಸಮಸ್ಯೆ, ವಾಕರಿಕೆ, ಚರ್ಮದ ದದ್ದುಗಳು, ತಲೆನೋವು ಸಮಸ್ಯೆ ಕಾಣಿಸಿಕೊಂಡಿದೆ. ಸಿಂಪಡಣೆ ವೇಳೆ ರೈತರು ಯಾವುದೇ ಸುರಕ್ಷತಾ ಕವಚವನ್ನು ಧರಿಸಿರಲಿಲ್ಲ. ಹೊಸ ಸಿಂಪಡಣೆ ಯಂತ್ರ ಮತ್ತು ಕೇಂದ್ರ ಕೀಟನಾಶಕ ಮಂಡಳಿಯ ಹೊಸ ನಿಯಮವೇ ಇದಕ್ಕೆ ಕಾರಣ ಎಂದು ಪರಿಣತರು ಹೇಳಿದ್ದಾರೆ.
ಈ ಮಧ್ಯೆ ಪರಿಹಾರ ಕ್ರಮವಾಗಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಮಹಾರಾಷ್ಟ್ರ ಸರಕಾರ ಘೋಷಿಸಿದೆ. ಅಲ್ಲದೆ ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಸುರಕ್ಷಾ ಕವಚಗಳನ್ನು ವಿತರಿಸದೇ ಕೀಟನಾಶಕಗಳನ್ನು ಮಾರಾಟ ಮಾಡಿದ ಐವರು ಕೃಷಿ ಸೇವಾ ಕೇಂದ್ರದ ಮಾಲಕರ ವಿರುದ್ಧ ದೂರು ದಾಖಲಿಸಲಾಗಿದೆ. ಇನ್ನೊಂದೆಡೆ ಈ ಸಂಬಂಧ ಬಾಂಬೆ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ಸಂಬಂಧಿತ ಅಧಿಕಾರಿಗಳು ಮತ್ತು ಕೀಟನಾಶಕ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.