Tripura Floods: ಮೃತರ ಸಂಖ್ಯೆ 20ಕ್ಕೆ ಏರಿಕೆ… 450 ಪರಿಹಾರ ಶಿಬಿರಗಳಲ್ಲಿ 65,400 ಮಂದಿ
Team Udayavani, Aug 23, 2024, 9:18 AM IST
ಅಗರ್ತಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಭೂಕುಸಿತದಿಂದ ತ್ರಿಪುರಾದಲ್ಲಿ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ (ಆಗಸ್ಟ್ 23) ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕಂಡು ಕೇಳರಿಯದ ಮಳೆಯಾಗಿದ್ದು ದಕ್ಷಿಣ ತ್ರಿಪುರಾ ಜಿಲ್ಲೆಯ ಸಂತಿರ್ಬಜಾರ್ನಲ್ಲಿ ಬುಧವಾರ ತಡರಾತ್ರಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಭಾರೀ ಭೂಕುಸಿತ ಉಂಟಾಗಿ ಎರಡು ಕುಟುಂಬಗಳ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಾಣಿಕ್ ಸಹಾ, ಮಳೆ ಹಾಗೂ ಭೂ ಕುಸಿತದಿಂದ ಮೃತಪಟ್ಟ ಪ್ರತಿ ಸಂತ್ರಸ್ತ ಕುಟುಂಬಕ್ಕೆ ರಾಜ್ಯ ಸರ್ಕಾರ 4 ಲಕ್ಷ ಆರ್ಥಿಕ ನೆರವು ನೀಡಲಿದೆ ಎಂದು ಹೇಳಿದರು.
ತ್ರಿಪುರಾದ ಎಲ್ಲಾ ಎಂಟು ಜಿಲ್ಲೆಗಳಲ್ಲಿ ಸುಮಾರು 65,500 ಜನರು 450 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರದಿಂದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಇಡೀ ರಾಜ್ಯದಲ್ಲಿ 17 ಲಕ್ಷ ಜನರು ಸಂತ್ರಸ್ತರಾಗಿದ್ದಾರೆ ಎಂದು ಅವರು ಹೇಳಿದರು.
ಭಾರತೀಯ ಹವಾಮಾನ ಇಲಾಖೆ (IMD) ಅಗರ್ತಲಾದಲ್ಲಿ ಬುಧವಾರ ಬೆಳಿಗ್ಗೆ 8.30 ರಿಂದ ಗುರುವಾರ ಬೆಳಿಗ್ಗೆ 8.30 ರವರೆಗೆ 233 ಮಿಮೀ ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್ ಶಾ ಘೋಷಣೆ
Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.