![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 30, 2020, 10:59 AM IST
ನವದೆಹಲಿ: ಮಾರಣಾಂತಿಕ ಕೋವಿಡ್ 19 ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೊಳಿಸಿದ 21 ದಿನಗಳ ಲಾಕ್ ಡೌನ್ ಅನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದುವರಿಸುವ ಸಿದ್ಧತೆಯಲ್ಲಿದೆ ಎಂಬ ಊಹಾಪೋಹವನ್ನು ಅಲ್ಲಗಳೆದಿದ್ದು, ಸದ್ಯ ಅಂತಹ ಯಾವುದೇ ಯೋಜನೆ ಇಲ್ಲ ಎಂದು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಇಂತಹ ವರದಿ ನೋಡಿ ನನಗೆ ನಿಜಕ್ಕೂ ಅಚ್ಚರಿಯಾಯ್ತು. ದೇಶದಲ್ಲಿ ಲಾಕ್ ಡೌನ್ ಮುಂದುವರಿಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರ ಹಾಕಿಕೊಂಡಿಲ್ಲ ಎಂದು ಹೇಳಿದರು.
ಭಾನುವಾರ ಪ್ರಧಾನಿ ಮೋದಿ ಮನ್ ಕೀ ಬಾತ್ ಮೂಲಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ 19 ಸೋಂಕು ತಡೆಗಟ್ಟಲು ಲಾಕ್ ಡೌನ್ ಅನಿವಾರ್ಯವಾಗಿತ್ತು. ಅಲ್ಲದೇ ದಿಢೀರ್ ಲಾಕ್ ಡೌನ್ ನಿರ್ಧಾರ ಘೋಷಿಸಿದ್ದಕ್ಕೆ ದೇಶದ ಜನರ ಕ್ಷಮೆಯಾಚಿಸುವುದಾಗಿ ತಿಳಿಸಿದ್ದರು.
ನಮಗೆ ಬೇರೆ ಆಯ್ಕೆಗಳೇ ಇರಲಿಲ್ಲವಾಗಿತ್ತು. ಹೀಗಾಗಿ ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ನೀವು ಜಾಗತಿಕವಾಗಿ ನೋಡಿದರೆ, ಈ ವೈರಸ್ ನ ಗಂಭೀರತೆ ಅರ್ಥವಾಗುತ್ತದೆ. ನಿಮಗೆ ಈ ನಿರ್ಧಾರ ಅಗತ್ಯವಾಗಿ ಬೇಕಾಗಲಿದೆ ಎಂಬ ಅರಿವಾಗಲಿದೆ ಎಂದು ತಿಳಿಸಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.