ಭಾರತ-ಬಾಂಗ್ಲಾ 22 ಒಪ್ಪಂದ; ಟೀಸ್ತಾ ನದಿ ನೀರು ಒಪ್ಪಂದವಿಲ್ಲ 


Team Udayavani, Apr 9, 2017, 3:45 AM IST

PTI4_8_2017_000128B.jpg

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಬಾಂಧವ್ಯ ವೃದ್ಧಿಯ ಪ್ರಮುಖ ಹೆಜ್ಜೆಯೆಂಬಂತೆ, ಶನಿವಾರ ಉಭಯ ದೇಶಗಳು ನಾಗರಿಕ ಪರಮಾಣು ಸಹಕಾರ, ರಕ್ಷಣೆ ಸೇರಿದಂತೆ 22 ಒಪ್ಪಂದಗಳಿಗೆ ಸಹಿ ಹಾಕಿವೆ.

ಭಾರತ ಪ್ರವಾಸದಲ್ಲಿರುವ ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರು ನಮ್ಮ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ, ಅವರ ಸಮ್ಮುಖದಲ್ಲೇ ಎರಡೂ ದೇಶಗಳು ಈ ಒಪ್ಪಂದವನ್ನು ಮಾಡಿಕೊಂಡಿವೆ. ಸೇನಾ ಸಾಮಗ್ರಿಗಳ ಖರೀದಿಗಾಗಿ ಭಾರತದಿಂದ ಬಾಂಗ್ಲಾಗೆ 500 ದಶಲಕ್ಷ ಡಾಲರ್‌(3,213.50 ಕೋಟಿ ರೂ.) ಸಾಲ, ಬಾಂಗ್ಲಾದಲ್ಲಿನ ಯೋಜನೆಗಳ ಅನುಷ್ಠಾನಕ್ಕಾಗಿ 4.5 ಶತಕೋಟಿ ಡಾಲರ್‌(28,900 ಕೋಟಿ ರೂ.) ವಿನಾಯ್ತಿ ದರದ ಸಾಲ ಕೂಡ ಈ ಒಪ್ಪಂದಗಳಲ್ಲಿ ಸೇರಿವೆ.

ಆದರೆ, ಎರಡೂ ದೇಶಗಳ ನಡುವಿನ ನದಿ ನೀರು ಹಂಚಿಕೆ ವಿವಾದಕ್ಕೆ ಕಾರಣವಾದ “ಟೀಸ್ತಾ ನೀರು ಹಂಚಿಕೆ’ ಕುರಿತು ಯಾವುದೇ ಒಪ್ಪಂದ ನಡೆದಿಲ್ಲ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, “7 ವರ್ಷಗಳಿಂದಲೂ ಇರುವ ವಿವಾದವನ್ನು ಆದಷ್ಟು ಬೇಗ ಪರಿಹರಿಸುವ ವಿಶ್ವಾಸವಿದೆ’ ಎಂದಿದ್ದಾರೆ. 2011ರಲ್ಲಿ ಅಂದಿನ ಪ್ರಧಾನಿ ಮನಮೋಹನ್‌ಸಿಂಗ್‌ ಅವರು ಬಾಂಗ್ಲಾ ಪ್ರವಾಸ ಮಾಡಿದ್ದಾಗ ಟೀಸ್ತಾ ನದಿ ನೀರು ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿದ್ದರು. ಆದರೆ, ಪಶ್ಚಿಮ ಬಂಗಾಳದ ವಿರೋಧದಿಂದಾಗಿ ಕೊನೇ ಕ್ಷಣದಲ್ಲಿ ಅದು ಸಾಧ್ಯವಾಗಿರಲಿಲ್ಲ.

ಪ್ರಾಯೋಗಿಕ ರೈಲಿಗೆ ಚಾಲನೆ: ಮಾತುಕತೆ ಬಳಿಕ ಪ್ರಧಾನಿ ಮೋದಿ ಹಾಗೂ ಹಸೀನಾ ಅವರು ಕೋಲ್ಕತ್ತಾದಿಂದ ಬಾಂಗ್ಲಾದ ಖುಲಾ° ನಗರದ ನಡುವೆ ಸಂಚರಿಸುವ ಬಸ್‌, ಪ್ರಯಾಣಿಕ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದರು. ಈ ವೇಳೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರೂ ಇದ್ದರು. 

ಪಾಕ್‌ ವಿರುದ್ಧ ಮೋದಿ ವಾಗ್ಧಾಳಿ:  1971ರ ಬಾಂಗ್ಲಾ ಸ್ವಾತಂತ್ಯÅ ಸಮರದಲ್ಲಿ ಮಡಿದ ಹುತಾತ್ಮರ ಕುಟುಂಬಗಳ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ, “ಭಾರತ-ಬಾಂಗ್ಲಾ ಸಂಬಂಧವು ರಕ್ತದಲ್ಲೇ ಇರುವಂಥದ್ದು. ನಮ್ಮ ಜನರ ಸುರಕ್ಷಿತ ಭವಿಷ್ಯಕ್ಕಾಗಿ ಇರುವಂಥ ಬಂಧವಿದು,’ ಎಂದರು. ಇದೇ ವೇಳೆ, ಉಗ್ರವಾದಕ್ಕೆ ಪ್ರೇರಣೆ ಕೊಡುತ್ತಿರುವ ಪಾಕಿಸ್ತಾನದ ವಿರುದ್ಧವೂ ಅವರು ಕಿಡಿಕಾರಿದರು. “ಅದು ಭಯೋತ್ಪಾದನೆಯನ್ನು ಹುಟ್ಟುಹಾಕುವ, ಸ್ಫೂರ್ತಿ ನೀಡುವ ಮತ್ತು ಬೆಳೆಸುವ ದೇಶ. ಮಾನವೀಯತೆ ಅವರ ಆದ್ಯತೆ ಅಲ್ಲ. ಬದಲಿಗೆ ಪ್ರತ್ಯೇಕತಾವಾದ ಮತ್ತು ಉಗ್ರವಾದವೇ ಆ ದೇಶದ ಜೀವಾಳ,’ ಎಂದು ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸದೇ ವಾಗ್ಧಾಳಿ ನಡೆಸಿದರು.

“ಸ್ಟೆಪ್‌ ಡೌನ್‌’ ಎಂದ ನಿರೂಪಕ!
ಕಾರ್ಯಕ್ರಮದ ನಿರೂಪಕ ಬಳಸಿದ “ಸ್ಟೆಪ್‌ ಡೌನ್‌’ ಎಂಬ ಪದವು ಪ್ರಧಾನಿ ಮೋದಿ ಹಾಗೂ ಶೇಖ್‌ ಹಸೀನಾ ಅವರನ್ನು ಒಂದು ಕ್ಷಣ ದಂಗುಬಡಿಸಿದ ಘಟನೆ ನಡೆದಿದೆ. ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ ಬಳಿಕ ಇಬ್ಬರಿಗೂ ವೇದಿಕೆಯಿಂದ ಕೆಳಗಿಳಿಯುವಂತೆ ಕಾರ್ಯ ಕ್ರಮದ ನಿರೂಪಕರು ಮನವಿ ಮಾಡಬೇಕಿತ್ತು. ಈ ವೇಳೆ ಅವರು, “ಪ್ಲೀಸ್‌ ಸ್ಟೆಪ್‌ ಅವೇ ಫ್ರಂ ದಿ ಡಯಾಸ್‌'(ದಯವಿಟ್ಟು ವೇದಿಕೆಯನ್ನು ಬಿಟ್ಟುಕೊಡಬೇಕಾಗಿ ವಿನಂತಿ) ಎನ್ನುವ ಬದಲು ತಪ್ಪಾಗಿ, “ಐ ರಿಕ್ವೆಸ್ಟ್‌ ಬೋತ್‌ ಪ್ರೈಮ್‌ ಮಿನಿಸ್ಟರ್ಸ್‌ ಟು ಸ್ಟೆಪ್‌ ಡೌನ್‌’ ಎಂದರು. ಸ್ಟೆಪ್‌ ಡೌನ್‌ ಎನ್ನುವುದು ಪದತ್ಯಾಗ ಮಾಡಿ ಎಂದು ಕೋರಿಕೊಳ್ಳುವ ಪದ. ನಿರೂಪಕನಿಂದ ಈ ಮಾತು ಹೊರಬೀಳುತ್ತಿದ್ದಂತೆಯೇ, ಪ್ರಧಾನಿ ಮೋದಿ, ಶೇಖ್‌ ಹಸೀನಾ ಸೇರಿದಂತೆ ಇಡೀ ಸುದ್ದಿಗೋಷ್ಠಿ ನಗೆಗಡಲಲ್ಲಿ ತೇಲಿದ್ದು ಕಂಡುಬಂತು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.