Airports; 25 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ: ಸಂಸ್ಥೆಗಳಿಗೆ ಭಾರೀ ನಷ್ಟ


Team Udayavani, Oct 21, 2024, 6:40 AM IST

Vimana 2

ಮುಂಬಯಿ / ಹೊಸದಿಲ್ಲಿ: ವಿಮಾನ ಗಳಿಗೆ ಹುಸಿಬಾಂಬ್‌ ಬೆದರಿಕೆ ಒಡ್ಡುವ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದ್ದು, ರವಿವಾರವೂ 25 ವಿಮಾನ ಗಳಿಗೆ ಬೆದರಿಕೆ ಒಡ್ಡಲಾಗಿದೆ. ಇದರಿಂದಾಗಿ ಪ್ರಯಾಣದಲ್ಲಿ ವ್ಯತ್ಯಯವಾಗಿದ್ದು, ಜನರು ಪರದಾಡುವಂತಾಗಿದೆ. ರವಿ ವಾರದ ವರೆಗೆ ಒಟ್ಟು 90 ವಿಮಾನಗಳು ಹುಸಿ ಕರೆಗಳ ಸಮಸ್ಯೆಗಳನ್ನು ಎದುರಿಸಿವೆ. ಈ ಹುಸಿ ಬೆದರಿಕೆಗಳಿಂದ ವಿಮಾನ ಯಾನ ಸಂಸ್ಥೆಗಳಿಗೆ ಭಾರೀ ನಷ್ಟ ಉಂಟಾಗುತ್ತಿದೆ.
ರವಿವಾರ ಇಂಡಿಗೋ, ವಿಸ್ತಾರ, ಅಕಾಸ ಏರ್‌ ಮತ್ತು ಏರಿಂಡಿಯಾ ಸಂಸ್ಥೆಗಳ ತಲಾ 6 ವಿಮಾನಗಳಿಗೆ ಬೆದರಿಕೆ ಕರೆಗಳು ಬಂದಿವೆ. ನಮ್ಮ ಪ್ರಯಾಣಿಕರು ಮತ್ತು ಸಿಬಂದಿಯ ಸುರಕ್ಷೆ ಹಾಗೂ ಭದ್ರತೆ ನಮ್ಮ ಆದ್ಯತೆಯಾಗಿದೆ. ಮಾರ್ಗಸೂಚಿ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಡಿಗೊ ಸಂಸ್ಥೆ ಹೇಳಿದೆ.

ಹುಸಿ ಸಂದೇಶಗಳ ಬಗ್ಗೆ ಮುಂಬಯಿ ಮತ್ತು ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿ ದ್ದಾರೆ. ಸುಳ್ಳು ಸಂದೇಶ ಕಳುಹಿಸು ವವರನ್ನು ನೋ ಫ್ಲೈ ಪಟ್ಟಿಗೆ ಸೇರ್ಪಡೆ ಮಾಡಲು ಸರಕಾರ ಚಿಂತನೆ ನಡೆಸಿದೆ.

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ: ದೂರು
ಮಂಗಳೂರು: ದೇಶದ ವಿವಿಧ ಭಾಗಗಳ ಏರ್‌ ಇಂಡಿಯಾ ವಿಮಾನಗಳಿಗೆ ರವಿವಾರ ಟ್ವಿಟರ್‌ ಖಾತೆಯಲ್ಲಿ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಅದರಲ್ಲಿ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬಾೖಗೆ ರವಿವಾರ ಪ್ರಯಾಣಿಸಿದ ವಿಮಾನವೂ ಸೇರಿತ್ತು.

ಮಧ್ಯಾಹ್ನ 12.35ರ ಸುಮಾರಿಗೆ ಈ ಬಾಂಬ್‌ ಬೆದರಿಕೆಯ ಸಂದೇಶ ಟ್ವಿಟರ್‌ನಲ್ಲಿ ಹಾಕಲಾಗಿದ್ದು, “ಸಿಝೋಫರ್ನಿಯಾ 111′ ಎನ್ನುವ ಖಾತೆಯಿಂದ ಸಂದೇಶ ಬಂದಿದೆ. ದೇಶದ ವಿವಿಧಡೆಯ 6 ಏರ್‌ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿತ್ತು. ಮಂಗಳೂರಿನ ಏರ್‌ಇಂಡಿಯಾ ಸಿಬಂದಿ 1.30ರ ವೇಳೆಗೆ ಸಂದೇಶ ಗಮನಿಸಿದ್ದಾರೆ. ತತ್‌ಕ್ಷಣ ಈ ಬಗ್ಗೆ ಬಜಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆತಂಕವಾದಿಗಳು ಬೆದರಿಕೆ ಹಾಕಿದ್ದ ವಿಮಾನ ಬೆಳಗ್ಗೆ 9.30ರ ಹೊರಟು ಮಂಗಳೂರಿನಿಂದ ಹೊರಟು 1 ಗಂಟೆಯ ಸುಮಾರಿಗೆ ವೇಳೆಗೆ ದುಬಾೖಯಲ್ಲಿ ಇಳಿದಿದೆ. ವಿಮಾನದಲ್ಲಿ ಯಾವುದೇ ಅನಾಹುತಕಾರಿ ವಸ್ತು ಪತ್ತೆಯಾಗಿಲ್ಲ ಎಂದು ನಿಲ್ದಾಣದ ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಿಲ್ದಾಣಕ್ಕೂ ಹಲವು ಬಾರಿ ಬೆದರಿಕೆ ಇಮೇಲ್‌
ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಲವು ಬಾರಿ ಇ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ. ಕಳೆದ ಜೂನ್‌ 18ರ ಮಂಗಳವಾರ ಮಧ್ಯಾಹ್ನ 12.43ಕ್ಕೆ ವಿಮಾನ ನಿಲ್ದಾಣದ ಇಮೇಲ್‌ ಐಡಿಗಳಿಗೆ ಬಂದಿರುವ ಸಂದೇಶದಲ್ಲಿ, ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇಟ್ಟಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಳ್ಳಲಿದೆ ಎನ್ನುವ ತಿಳಿಸಲಾಗಿತ್ತು. ಎಪ್ರಿಲ್‌ 29ರಂದು ಮಂಗಳೂರು ವಿಮಾನ ನಿಲ್ದಾಣ ಪ್ರಾ ಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್‌ ಬಂದಿತ್ತು. ಟೆರರೈಜರ್ಸ್‌ 111 ಸಂಘಟನೆಯ ಹೆಸರಿನಲ್ಲಿ ಇಮೇಲ್‌ ಸಂದೇಶ ಬಂದಿತ್ತು. 2023ರ ಡಿ. 26ರಂದು ರಾತ್ರಿ 11.59ಕ್ಕೆ ದೂ xಟnಟcಜಿkಟnಟcಜಿ10ಃಚಿಛಿಛಿಚಿlಛಿ. cಟಞ ಹೆಸರಿನ ಇ ಮೇಲ್‌ ನಿಂದ ಬೆದರಿಕೆ ಸಂದೇಶ ಬಂದಿತ್ತು.

 

ಟಾಪ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

TRAIN-Acci

Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!

Omar-Abdulla-Run

CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್‌!

CHandrababu-Naidu

Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.