ಮುಂಬಯಿ-ದಿಲ್ಲಿ ನಡುವೆ 2ನೇ ವಂದೇ ಭಾರತ್‌?

ದೇಶದ 2ನೇ ಸೆಮಿ ಹೈ ಸ್ಪೀಡ್‌ ರೈಲು

Team Udayavani, May 10, 2019, 4:25 PM IST

1-bbb

ಮುಂಬಯಿ: ಸ್ವದೇಶಿ ನಿರ್ಮಿತ ಸೆಮಿ ಹೈ ಸ್ಪೀಡ್‌ ರೈಲು ವಂದೇ ಭಾರತ್‌ (ಟ್ರೈನ್‌ -18) ಪ್ರಸಕ್ತ ತಿಂಗಳ ಅಂತ್ಯದ ವೇಳೆಗೆ ಚೆನ್ನೈ ಇಂಟೆಗ್ರಲ್‌ ಕೋಚ್‌ ಫ್ಯಾಕ್ಟರಿ (ಐಸಿಎಫ್‌)ಯಿಂದ ಹೊರಬರಲಿದೆ.

ದೇಶದ 2ನೇ ಸೆಮಿ ಹೈ ಸ್ಪೀಡ್‌ ರೈಲು ಆಗಿರುವ ಇದು ದಿಲ್ಲಿ ಮತ್ತು ಮುಂಬಯಿ ನಡುವೆ ಓಡುವ ನಿರೀಕ್ಷೆಯಿದೆ. ವಂದೇ ಭಾರತ್‌ ಅನ್ನು ಮೂಲತಃ ಟ್ರೈನ್‌ 18 ಹೆಸರಿನಿಂದ ವಿನ್ಯಾಸಗೊಳಿಸಲಾಗಿತ್ತು. 2018ರ ಕಾರಣದಿಂದಾಗಿ ಅದಕ್ಕೆ ಈ ಹೆಸರು ಬಂದಿತ್ತು. ಇದಾದ ಬಳಿಕ ಟ್ರೈನ್‌-19 ಎಂಬ ಹೆಸರಿನೊಂದಿಗೆ ಈ ವರ್ಷ ಒಂದು ಹೊಸ ರೀತಿಯ ರೈಲಿನ ಸೆಟ್‌ ಅನ್ನು ತರಲು ಯೋಚಿಸಲಾಗಿತ್ತು. ಆದರೆ ಈಗ ಆ ಯೋಜನೆಯನ್ನು ರದ್ದುಗೊಳಿಸಲಾಗಿದ್ದು, ಟ್ರೈನ್‌-19 ಬದಲಿಗೆ ಟ್ರೈನ್‌-18 ಮಾದರಿಯ ಹೆಚ್ಚುವರಿ ರೈಲುಗಳನ್ನು ತರಲು ನಿರ್ಣಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೊಸ ರೈಲಿನ ವಿನ್ಯಾಸದಲ್ಲಿ ಬದಲಾವಣೆ
ಹೊಸ ವಂದೇ ಭಾರತ್‌ ರೈಲಿನ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಇದರಲ್ಲಿ ಮೊದಲು ಊಟಕ್ಕೆ ಸಾಕಷ್ಟು ಸ್ಥಳಾವಕಾಶ ಇದ್ದಿರಲಿಲ್ಲ. ಆದರೆ, ಈಗ ಸಾಕಷ್ಟು ಸ್ಥಳವನ್ನು ಉಪಲಬ್ಧಗೊಳಿಸಲಾಗಿದೆ. ರೈಲು ಹರಿದು ಜಾನುವಾರುಗಳು ಕತ್ತರಿಸಲ್ಪಡುವಂ ತಹ ಘಟನೆಗಳನ್ನು ತಪ್ಪಿಸಲು ಈ ರೈಲಿನಲ್ಲಿ ಕ್ಯಾಟಲ್‌ ಗಾರ್ಡ್‌ನೂ° ಅಳವಡಿಸಲಾಗಿದೆ.
ವಂದೇ ಭಾರತ್‌ನ ಹೊಸ ರೈಲುಗಳ ಸೆಟ್ಟು ಅಸ್ತಿತ್ವದಲ್ಲಿರುವ ರೈಲಿನ ತುಲನೆಯಲ್ಲಿ ಹಲವು ರೀತಿಯಲ್ಲಿ ಭಿನ್ನ ಮತ್ತು ಉತ್ತಮವಾಗಿರಲಿದೆ. ಉದಾಹರಣೆಗೆ, ಇದರ ಸೀಟುಗಳನ್ನು ಶತಾಬ್ದಿ ರೈಲಿನ ಸೀಟುಗಳಿಗಿಂತಲೂ ಹೆಚ್ಚು ಹಿಂದಕ್ಕೆ ಬಾಗಿಸಬಹುದಾಗಿದೆ. ಅಷ್ಟೇ ಅಲ್ಲದೆ, ಸ್ವಯಂಚಾಲಿತ ಬಾಗಿಲುಗಳು ಜಾಮ್‌ ಆಗುವ ಸಂದರ್ಭದಲ್ಲಿ ಅದನ್ನು ಕೈಯಾರೆ ತೆರೆಯಲು ಕೂಡ ಇದರಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ.

2 ಎಕ್ಸಿಕ್ಯೂಟಿವ್‌ ಬೋಗಿ
ಇದು 16 ಎಸಿ ಬೋಗಿಗಳು, 2 ಎಕ್ಸ್‌ಕ್ಯೂಟಿವ್‌ ಬೋಗಿಗಳನ್ನು ಹೊಂದರಲಿದೆ. ಡ್ರೈವಿಂಗ್‌ ಬೋಗಿಯಲ್ಲಿ 44 ಸೀಟುಗಳಿದ್ದರೆ, ಟ್ರೇಲರ್‌ ಬೋಗಿಯಲ್ಲಿ 78 ಸೀಟುಗಳಿರಲಿವೆ. ಎಕ್ಸಿಕ್ಯೂಟಿವ್‌ ಚೇರ್‌ ಕಾರ್‌ನಲ್ಲಿ 52 ಸೀಟುಗಳಿರಲಿವೆ. ರೈಲಿನ ಗರಿಷ್ಠ ವೇಗ ಗಂಟೆಗೆ 220 ಕಿ.ಮೀ. ಆಗಿದೆ. ಶತಾಬ್ದಿ ಅಥವಾ ರಾಜಧಾನಿ ಎಕ್ಸ್‌ಪ್ರೆಸ್‌ಗಿಂತ ಇದರ ವೇಗ ಶೇ.10ರಿಂದ 15ರಷ್ಟು ಹೆಚ್ಚಾಗಿದೆ. ಅಂದಹಾಗೆ ಈ ರೈಲು ಲೋಕೋಮೋಟಿವ್‌ ಅಲ್ಲ ಎಂಬುದು ಗಮನಿಸಬೇಕಾದ ಅಂಶ. ಯಂತ್ರಗಳ ಸಹಾಯದಿಂದ ಚಲಿಸುತ್ತದೆ.

ಸಮಯದ ಉಳಿತಾಯ
ಎರಡನೇ ಸೆಮಿ ಹೈ ಸ್ಪೀಡ್‌ ಟ್ರೈನ್‌ ವಂದೇ ಭಾರತ್‌ ಮುಂಬಯಿ-ಹೊಸದಿಲ್ಲಿ ಮಾರ್ಗದ ನಡುವೆ ಓಡಲಿರುವ ಬಗ್ಗೆ ರೈಲ್ವೇ ಮಂಡಳಿಯು ಸಂಕೇತವನ್ನು ನೀಡಿದೆ. ಈ ರೈಲು ಮುಂಬಯಿಯಿಂದ ದಿಲ್ಲಿಯನ್ನು ತಲುಪಲು 12 ಗಂಟೆಗಳನ್ನು ತೆಗೆದುಕೊಳ್ಳಲಿದೆ. ಅದೇ, ಮುಂಬಯಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ದಿಲ್ಲಿ ಮತ್ತು ಮುಂಬಯಿ ನಡುವಿನ ಅಂತರವನ್ನು ಕ್ರಮಿಸಲು 16 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಇಂಥದರಲ್ಲಿ ವಂದೇ ಭಾರತ್‌ ಪ್ರಯಾಣಿಕರನ್ನು 4 ಗಂಟೆಗಳ ಮೊದಲೇ ಅವರ ಗಮ್ಯ ಸ್ಥಾನಕ್ಕೆ ತಲುಪಿಸಲಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.