![1-havy](https://www.udayavani.com/wp-content/uploads/2024/12/1-havy-415x277.jpg)
ಸುರಕ್ಷಾ ಕ್ರಮಗಳಿಲ್ಲದೆ ಕಾರ್ಖಾನೆಯ ಗ್ಯಾಸ್ ಟ್ಯಾಂಕ್ ನ ಒಳಗೆ ಇಳಿದು ಮೂವರು ಕಾರ್ಮಿಕರು ಸಾವು
Team Udayavani, Mar 28, 2021, 1:36 PM IST
![3 labourers lode there life after being sent to paint underground gas tank in Ambernath](https://www.udayavani.com/wp-content/uploads/2021/03/ASCV-2-620x372.jpg)
ನವದೆಹಲಿ: ಯಾವುದೇ ವಿಧವಾದ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳದೆ ಕಾರ್ಖಾನೆಯ ಗ್ಯಾಸ್ ಟ್ಯಾಂಕ್ ನ ಒಳಗೆ ಇಳಿದ ಪರಿಣಾಮ ಮೂರು ಜನ ಕಾರ್ಮಿಕರು ಸಾವನಪ್ಪಿರುವ ಘಟನೆ ಅಂಬರ್ನಾಥ್ ಪ್ರದೇಶದ ರಾಸಾಯನಿಕ ಕಂಪನಿಯೊಂದರಲ್ಲಿ ನಡೆದಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (MIDC) ಕಾರ್ಮಿಕರು ಗ್ಯಾಸ್ ಟ್ಯಾಂಕ್ ನ ಒಳಗೆ ಇಳಿಯುವ ಸಮಯದಲ್ಲಿ ಯಾವುದೇ ವಿಧವಾದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಈ ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ ಎಂದು ತಿಳಿಸಿದೆ.
ಗುತ್ತಿಗೆದಾರ ವ್ಯಕ್ತಿಯು ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಸೌಲಭ್ಯಗಳನ್ನು ನೀಡದೆ ಗ್ಯಾಸ್ ಟ್ಯಾಂಕ್ ಒಳಗೆ ಇಳಿಸಿದ್ದು, ಅಪಾಯಕಾರಿ ಗ್ಯಾಸ್ ಸೇವನೆಯಿಂದಾಗಿ ಇವರು ಸಾವನಪ್ಪಿದ್ದಾರೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು 30 ಅಡಿ ಆಳವಿರುವ ಈ ಟ್ಯಾಂಕ್ ಒಳಗೆ ಕಾರ್ಮಿಕರು ಇಳಿದಿದ್ದು, ಕೆಲವು ಘಂಟೆಗಳ ಬಳಿಕ ಕಾವಲುಗಾರನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಾರ್ಮಿರನ್ನು ನೋಡಿದ್ದಾರೆ. ಆ ಬಳಿಕವೂ ಆತ ತನ್ನ ಮೇಲಿನ ಹಲವು ಅಧಿಕಾರಿಗಳಿಗೆ ವಿಷಯವನ್ನು ತಿಳಿಸಲು ಮುಂದಾಗಿದ್ದು, ಇದರಿಂದ ಇನ್ನೂ ಎರಡು ಗಂಟೆಗಳಷ್ಟು ಸಮಯ ವ್ಯರ್ಥವಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.
ಇದಾದ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ವ್ಯಕ್ತಿಗಳನ್ನು ಗ್ಯಾಸ್ ಟ್ಯಾಂಕ್ ನಿಂದ ಹೊರಕ್ಕೆ ತೆಗೆದಿದ್ದಾರೆ. ಆದರೆ ಅಷ್ಟರಲ್ಲೇ ಈ ಮೂವರು ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.
ಈ ವ್ಯಕ್ತಿಗಳ ಕುರಿತಾದ ಹೆಚ್ಚಿನ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಈ ಕುರಿತಾಗಿ ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1-mn](https://www.udayavani.com/wp-content/uploads/2024/12/1-mn-150x96.jpg)
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
![Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್](https://www.udayavani.com/wp-content/uploads/2024/12/6-52-150x90.jpg)
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
![Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ](https://www.udayavani.com/wp-content/uploads/2024/12/bus-5-150x100.jpg)
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
![saavu](https://www.udayavani.com/wp-content/uploads/2024/12/saavu-150x102.jpg)
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.