Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
Team Udayavani, Jul 7, 2024, 3:26 PM IST
ಜೈಪುರ: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಶನಿವಾರ ರಾತ್ರಿ 9:30ರ ಸಮಯದಲ್ಲಿ ಕಾರಿನಲ್ಲಿ ಯೂಟ್ಯೂಬರ್ ಗಳಾದ ತರುಣ್, ಹರ್ಷ್ ಮತ್ತು ಹಿಮಾಂಶು ಜೊತೆಯಾಗಿ ಹೋಗುತ್ತಿದ್ದರು. ಈ ಮೂವರು ಯೂಟ್ಯೂಬ್ ನಲ್ಲಿ ಗೇಮಿಂಗ್ ಹಾಗೂ ಟ್ರೇಡಿಂಗ್ ಸಂಬಂಧಿತ ವಿಡಿಯೋಗಳನ್ನು ಮಾಡುತ್ತಿದ್ದರು. ಇದರಿಂದ ಇವರಿಗೆ ಒಳ್ಳೆಯ ಆದಾಯ ಬರುತ್ತಿತ್ತು.
ಈ ವಿಚಾರವನ್ನು ಅರಿತ ಅಪಹರಣಕಾರರು ಯೂಟ್ಯೂಬರ್ ಗಳು ಹೋಗುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ಎರಡು ಕಾರಿನಲ್ಲಿ ಬಂದ ಅಪಹರಣಕಾರರು ಕಾರಿನಿಂದ ಇಳಿದು ಕಾರಿನ ಮೇಲೆ ದಾಳಿ ಮಾಡಿ, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಕಾರಿನೊಳಗೆ ಕೂರಿಸಿಕೊಂಡು ಹೋಗಿದ್ದಾರೆ.
ಈ ಘಟನೆಯ ವಿಡಿಯೋ ಕಟ್ಟಡವೊಂದರಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಹರಣವಾದ 3 ಗಂಟೆಯಲ್ಲಿ ಪೊಲೀಸರು ಆರೋಪಿಗಳಾದ ವಿಕ್ರಮ್ ಸಿಂಗ್ ಮತ್ತು ರಿಷಬ್ ಚೌಧರಿಯನ್ನು ಬಂಧಿಸಿ, ಮೂವರು ಯೂಟ್ಯೂಬರ್ ಗಳನ್ನು ರಕ್ಷಿಸಿದ್ದಾರೆ.
ಆರೋಪಿಗಳು ಯೂಟ್ಯೂಬರ್ ಗಳನ್ನು ಬೆದರಿಸಿ ಅವರ ಖಾತೆಯಿಂದ ತಮ್ಮ ಖಾತೆಗೆ ಆನ್ ಲೈನ್ ಮೂಲಕ 3 ಲಕ್ಷ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇತರೆ ಆರೋಪಿಗಳನ್ನು ಪತ್ತೆಗೆ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.