Wayanad Tragedy: 308 ಕ್ಕೇರಿದ ಮೃತರ ಸಂಖ್ಯೆ, ಡ್ರೋನ್ ಆಧಾರಿತ ರಾಡಾರ್ ಮೂಲಕ ಪತ್ತೆ ಕಾರ್ಯ


Team Udayavani, Aug 2, 2024, 11:29 AM IST

Wayanad Tragedy: 308 ಕ್ಕೇರಿದ ಮೃತರ ಸಂಖ್ಯೆ, ಡ್ರೋನ್ ಆಧಾರಿತ ರಾಡಾರ್ ಮೂಲಕ ಪತ್ತೆ ಕಾರ್ಯ

ವಯನಾಡ್ : ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 308 ಕ್ಕೆ ತಲುಪಿದೆ. ಇನ್ನೂ 300 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ರಕ್ಷಣಾ ತಂಡಗಳು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದುವರೆಗೆ ನೂರಾರು ಜನರನ್ನು ರಕ್ಷಿಸಿ ಸುರಕ್ಷಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

40 ತಂಡಗಳೊಂದಿಗೆ ಶೋಧ ಕಾರ್ಯಾಚರಣೆ:
ಶುಕ್ರವಾರ ಬೆಳಗ್ಗೆ ಸುಮಾರು 40 ತಂಡಗಳು ಮಂಡಕ್ಕೈ, ಚುರಲ್‌ಮಲಾ, ಅಟ್ಟಮಲ ಮತ್ತು ನೂಲ್‌ಪೂಜಾ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯು 190 ಅಡಿ ಉದ್ದದ ಬೈಲಿ ಸೇತುವೆಯನ್ನು ತ್ವರಿತವಾಗಿ ಪೂರ್ಣಗೊಳಿಸಿತು. ಇದರೊಂದಿಗೆ ರಕ್ಷಣಾ ಕಾರ್ಯಾಚರಣೆ ವೇಗ ಸಿಕ್ಕಿದಂತಾಗಿದೆ. ಈ ಸೇತುವೆಯ ಮೂಲಕ ಭೂಕುಸಿತ ಪ್ರದೇಶಗಳಿಗೆ ಅಗೆಯುವ ಯಂತ್ರಗಳು, ಆಂಬ್ಯುಲೆನ್ಸ್ ಸೇರಿದಂತೆ ಭಾರಿ ಯಂತ್ರಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ಚಾಲಿಯಾರ್ ನದಿಯ ಕರಾವಳಿ ಪ್ರದೇಶಗಳಲ್ಲಿನ ದಿಬ್ಬಗಳಲ್ಲಿ ಸಿಲುಕಿರುವ ಮೃತ ದೇಹಗಳನ್ನು ಹೊರತೆಗೆಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಸ್ಥಳೀಯ ಈಜುಗಾರರು ಮೃತದೇಹಗಳಿಗಾಗಿ ನದಿ ದಡದಲ್ಲಿ ಶೋಧ ನಡೆಸಲಿದ್ದಾರೆ. ಇದೇ ವೇಳೆ ಪೊಲೀಸರು ಹೆಲಿಕಾಪ್ಟರ್ ಮೂಲಕ ಶೋಧ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ.

ಡ್ರೋನ್ ಆಧಾರಿತ ರಾಡಾರ್ ಮೂಲಕ ಮೃತದೇಹ ಪತ್ತೆ:
ಅಲ್ಲದೆ, ದಿಬ್ಬಗಳಲ್ಲಿರುವ ಮೃತ ದೇಹಗಳನ್ನು ಗುರುತಿಸಲು ಶನಿವಾರ ದೆಹಲಿಯಿಂದ ಡ್ರೋನ್ ಆಧಾರಿತ ರಾಡಾರ್ ತರಲಾಗುವುದು ಎಂದು ರಾಜ್ಯ ಸಚಿವ ಕೆ.ರಾಜನ್ ಹೇಳಿದ್ದಾರೆ. ಸದ್ಯ ಆರು ಪೊಲೀಸ್ ಶ್ವಾನಗಳು ಶೋಧ ಕಾರ್ಯದಲ್ಲಿದ್ದು, ಇನ್ನೂ ನಾಲ್ವರನ್ನು ತಮಿಳುನಾಡಿನಿಂದ ವಯನಾಡಿಗೆ ಕರೆತರಲಾಗುತ್ತಿದೆ. ಇದುವರೆಗೆ ಒಟ್ಟು 279 ಶವಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ವೈದ್ಯಕೀಯ ತಂಡಗಳು ಬಹಿರಂಗಪಡಿಸಿವೆ. ಘಟನೆಯಲ್ಲಿ 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೋ ಬೈಡನ್ ಸಂತಾಪ:
ವಯನಾಡ್ ಅವಘಡಲ್ಲಿ ಮೃತಪಟ್ಟವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸಂತಾಪ ಸೂಚಿಸಿದ್ದಾರೆ. ಜಿಲ್ ಬಿಡೆನ್ ಜೊತೆಗೆ ಟ್ವೀಟ್ ಮಾಡಿದ ಅಧ್ಯಕ್ಷ ಕೇರಳದಲ್ಲಿ ನಡೆದಿರುವ ಘಟನೆಗೆ ಬೇಸರ ವ್ಯಕ್ತಪಡಿಸಿದ ಅವರು ಈ ಸಂಕಷ್ಟದ ಸಮಯದಲ್ಲಿ ಭಾರತೀಯರ ಜೊತೆ ನಾವು ನಿಲ್ಲುವುದಾಗಿ ಹೇಳಿಕೊಂಡಿದ್ದಾರೆ.

ಮೊದಲೇ ಎಚ್ಚರಿಕೆ ನೀಡಿದ್ದೇವೆ ಎಂದ ಹವಾಮಾನ ಇಲಾಖೆ:
ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮಹಾಪಾತ್ರ ಅವರು ಕೇರಳದಲ್ಲಿ ಭಾರಿ ಮಳೆಯ ಬಗ್ಗೆ ಮುಂಚಿತವಾಗಿ ಸಾಮಾನ್ಯ ಎಚ್ಚರಿಕೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಜುಲೈ 30 ರಂದು ಬೆಳಿಗ್ಗೆ ರಾಜ್ಯಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಅದೇ ದಿನ ಮುಂಜಾನೆ ಭೂಕುಸಿತ ಸಂಭವಿಸಿದೆ. ಕೇರಳಕ್ಕೆ ಪ್ರವಾಹದ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ ಐಎಂಡಿ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮತ್ತೊಂದೆಡೆ, ಐಎಂಡಿ ಕೇರಳಕ್ಕೆ ಆರೆಂಜ್ ಅಲರ್ಟ್ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ವಿಜಯನ್ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.