Bihar; ಘೋರ ದುರಂತಗಳು: ಪವಿತ್ರ ಸ್ನಾನಕ್ಕೆ ತೆರಳಿದ 43 ಮಂದಿ ನೀರುಪಾಲು!!
Team Udayavani, Sep 26, 2024, 5:55 PM IST
ಪಾಟ್ನಾ:ಬಿಹಾರದಲ್ಲಿ ‘ಜೀವಿತ್ ಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ ಕನಿಷ್ಠ 43 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸ ರಕಾರ ಗುರುವಾರ(ಸೆ26) ತಿಳಿಸಿದೆ. ಬುಧವಾರ ನಡೆದ ಉತ್ಸವದಲ್ಲಿ ಬಿಹಾರದ 15 ಜಿಲ್ಲೆಗಳಲ್ಲಿ ಈ ದುರ್ಘಟನೆಗಳು ಸಂಭವಿಸಿವೆ.
ಪೂರ್ವ ಮತ್ತು ಪಶ್ಚಿಮ ಚಂಪಾರಣ್, ನಳಂದಾ, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್ಪುರ, ಸಮಸ್ತಿಪುರ್, ಗೋಪಾಲ್ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ನೀರುಪಾಲಾದ ಘಟನೆಗಳು ವರದಿಯಾಗಿವೆ.
ಇಲ್ಲಿಯವರೆಗೆ ಒಟ್ಟು 43 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
‘ಜೀವಿತ್ ಪುತ್ರಿಕಾ’ ಹಬ್ಬದ ಸಮಯದಲ್ಲಿ, ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡಿ ಪವಿತ್ರ ಸ್ನಾನ ಮಾಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.