ಆತ್ಯಹತ್ಯೆ ಸಾಧ್ಯತೆ: ನಿರ್ಭಯಾ ಅತ್ಯಾಚಾರಿಗಳ ಮೇಲೆ ಹದ್ದಿನ ಕಣ್ಣು
Team Udayavani, Jan 26, 2020, 6:30 AM IST
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೇರಿಸಲು ಇನ್ನು ಆರೇ ದಿನಗಳು ಬಾಕಿ ಉಳಿದಿದ್ದು, ಎಲ್ಲ ನಾಲ್ವರು ಅಪರಾಧಿಗಳ ಮೇಲೆಯೂ ತಿಹಾರ್ ಜೈಲಿನ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಗಲ್ಲುಶಿಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅತ್ಯಾಚಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆಯಿರುವ ಕಾರಣ ದಿನದ 24 ಗಂಟೆಯೂ ಅವರ ಮೇಲೆ ಕಣ್ಣಿಡಲಾಗುತ್ತಿದೆ. ಈ ಪ್ರಕ್ರಿಯೆಯನ್ನು “ಸೂಸೈಡ್ ವಾಚ್’ ಎಂದು ಕರೆಯಲಾಗುತ್ತದೆ.
ಜ.16ರಂದೇ ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್ ಗುಪ್ತಾ, ವಿನಯ್ ಶರ್ಮಾ ಮತ್ತು ಅಕ್ಷಯ್ನನ್ನು ಜೈಲು ಸಂಖ್ಯೆ 3ಕ್ಕೆ ವರ್ಗಾಯಿಸಲಾಗಿದೆ. ಹೈರಿಸ್ಕ್ ವಾರ್ಡ್ನ ಪ್ರತ್ಯೇಕ ಕೊಠಡಿಗಳಲ್ಲಿ ಇವರನ್ನು ಇಡಲಾಗಿದೆ.
ಗೋಡೆಗೆ ತಲೆ ಜಜ್ಜಿಕೊಳ್ಳುವ ಸಾಧ್ಯತೆ: ಈ ಕೊಠಡಿಗಳು 6×8 ಅಳತೆ ಹೊಂದಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸದಾಕಾಲ ಕಾಯುತ್ತಿದ್ದಾರೆ. ಇಲ್ಲಿಗೆ ಅಪರಾಧಿಗಳನ್ನು ಶಿಫ್ಟ್ ಮಾಡುವ ಮೊದಲೇ, ಒಳಗೆ ಲೋಹದ ಚೂರು, ಮೊಳೆ ಇದೆಯೇ ಎಂಬುದನ್ನು ಪರಿಶೀಲಿಸಲಾಗಿದೆ. ಅಪರಾಧಿಗಳು ಸ್ವತಃ ನೋವು ಮಾಡಿಕೊಳ್ಳಲು ಇರುವ ಏಕೈಕ ಮಾರ್ಗ, ತಲೆಯನ್ನು ಗೋಡೆಗೆ ಚಚ್ಚಿಕೊಳ್ಳುವುದು. ಹಿಂದೆ ಅನೇಕ ಅಪರಾಧಿಗಳು ಗಲ್ಲುಶಿಕ್ಷೆ ಮುಂದೂಡಲು ಇಂಥ ಕೃತ್ಯ ಎಸಗಿದ್ದೂ ಇದೆ ಎನ್ನುತ್ತಾರೆ ಜೈಲಧಿಕಾರಿಗಳು. ಹೀಗಾಗಿ, ತೀವ್ರ ನಿಗಾ ವಹಿಸಲಾಗುತ್ತಿದೆ.
ಮತ್ತೆ ಮೇಲ್ಮನವಿ: ಪದೇ ಪದೆ ಅರ್ಜಿ ಸಲ್ಲಿಸಿ ಗಲ್ಲುಶಿಕ್ಷೆ ವಿಳಂಬವಾಗಿಸುವ ಪ್ರಯತ್ನವನ್ನು ಅತ್ಯಾಚಾರಿಗಳು ಮುಂದುವರಿಸಿದ್ದಾರೆ. ಅಪರಾಧಿ ಮುಕೇಶ್ ಸಿಂಗ್ ಶನಿವಾರ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾನೆ. ಜ.17ರಂದೇ ಈತನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ
Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.