JMM Allegation; ಸಿಎಂ ಸೊರೇನ್ ವಿರುದ್ಧ ಸ್ಪರ್ಧಿಸಲು ಬಿಜೆಪಿ 5 ಕೋಟಿ ರೂ. ಆಫರ್
Team Udayavani, Oct 28, 2024, 1:16 AM IST
ಹೊಸದಿಲ್ಲಿ: ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯೊಳಗೇ ಅಭ್ಯರ್ಥಿಗಳಿಗೆ 5 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ ಎಂದು ಜೆಎಂಎಂ ನಾಯಕ ಮನೋಜ್ ಪಾಂಡೆ ಆರೋಪಿಸಿದ್ದಾರೆ.
ಬರಹೈಟ್ ಕ್ಷೇತ್ರದಲ್ಲಿ ಹೇಮಂತ್ ಸೊರೇನ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಅವರ ವಿರುದ್ಧ ಸ್ಪರ್ಧಿಸಲು ಬಿಜೆಪಿಗೆ ಅಭ್ಯರ್ಥಿಗಳು ಸಿಗುತ್ತಿಲ್ಲ. ಹಾಗಾಗಿ ಪಕ್ಷದೊಳಗೇ 5 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ. ಸೊರೇನ್ ವಿರುದ್ಧ ಸ್ಪರ್ಧಿಸಿ ಸೋಲಲು ಯಾರು ಇಷ್ಟಪಡುತ್ತಾರೆ? ಒಂದೊಮ್ಮೆ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿಗೆ 150 ಮತಗಳೂ ಬರಲ್ಲ ಎಂದು ಅವರು ವ್ಯಂಗ್ಯವಾಡಿದರು. ಬರಹೈಟ್ ಕ್ಷೇತ್ರಕ್ಕೆ ಸೊರೇನ್, ಗಂಡೇ ಕ್ಷೇತ್ರದಿಂದ ಅವರ ಪತ್ನಿ ಕಲ್ಪನಾ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.