![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 30, 2023, 1:08 PM IST
ಚೆನ್ನೈ: ಟ್ರಕ್ ವೊಂದು ಚಹಾದಂಗಡಿ ಹಾಗೂ ಇತರೆ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 5 ಮಂದಿ ಮೃತಪಟ್ಟು, 19 ಮಂದಿ ಗಾಯಗೊಂಡಿರುವ ಘಟನೆ ಶನಿವಾರ(ಡಿ.30 ರಂದು) ಮುಂಜಾನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಮಧುರವಾಯಲ್ನ ಸುರೇಶ್ (39), ಗೋಕುಲಕೃಷ್ಣನ್ (25) ತಿರುವಳ್ಳೂರಿನ ಸತೀಶ್(25), ಅಮಿಂಜಿಕರೈ; ಉತ್ತುಕೊಟ್ಟೈ ಮೂಲದ ಜೆಗನಾಥನ್ (60) ಶಾಂತಿ(55) ಎಂದು ಗುರುತಿಸಲಾಗಿದೆ.
ಟ್ರಕ್ ಸಿಮೆಂಟ್ ಚೀಲಗಳನ್ನು ಹೊತ್ತುಕೊಂಡು ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ . ಅಪಘಾತದ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಟ್ರಕ್ ನಿಯಂತ್ರಣ ತಪ್ಪಿ ಚಹಾದಂಗಡಿ ಹಾಗೂ ಪಕ್ಕದಲ್ಲಿದ್ದ ವಾಹನಗಳಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದಾರೆ. 19 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ಸಂದರ್ಭದಲ್ಲಿ ಅಂಗಡಿಯಲ್ಲಿ ಹಲವಾರು ಶಬರಿಮಲೆ ಯಾತ್ರಾರ್ಥಿಗಳು ಟೀ ಸೇವಿಸುತ್ತಿದ್ದರು. ಅಂಗಡಿ ಬಳಿ ನಿಲ್ಲಿಸಿದ್ದ ಕಾರು ಹಾಗೂ ಇತರೆ ದ್ವಿಚಕ್ರ ವಾಹನಗಳಿಗೂ ಅಪಘಾತದಿಂದ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.