Amarnath Yatra ಕಳೆದ ಎರಡು ದಿನದಲ್ಲಿ ಆರು ಯಾತ್ರಾರ್ಥಿಗಳ ಸಾವು
ಹವಾಮಾನ ವೈಪರೀತ್ಯ; ಎರಡನೇ ದಿನವೂ ಯಾತ್ರೆ ಸ್ಥಗಿತ
Team Udayavani, Jul 8, 2023, 11:56 AM IST
ಶ್ರೀನಗರ: ಕಳೆದ ಎರಡು ದಿನಗಳಲ್ಲಿ ಆರು ಮಂದಿ ಅಮರನಾಥ ಯಾತ್ರಿಗಳು ಸಾವನ್ನಪ್ಪಿದ್ದು, ಈ ವರ್ಷದ ತೀರ್ಥಯಾತ್ರೆಯಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರಲ್ಲಿ ಎಂಟು ಯಾತ್ರಾರ್ಥಿಗಳು ಹಾಗೂ ಒಬ್ಬರು ಐಟಿಬಿಪಿ ಸಿಬ್ಬಂದಿ ಇದ್ದಾರೆ.ಮೃತರ ವಿವರಗಳನ್ನು ಮತ್ತು ಸಾವಿನ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಆದರೆ ಪರ್ವತದಲ್ಲಿ ಕಡಿಮೆ ಆಮ್ಲಜನಕದ ಸಾಂದ್ರತೆಯಿಂದ ಹೃದಯ ಸ್ತಂಭನದಿಂದಾಗಿ ಅಮರನಾಥ ಯಾತ್ರಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇಲ್ಲಿಯವರೆಗೆ, ಯಾತ್ರೆಯಲ್ಲಿ ಒಂಬತ್ತು ಸಾವುಗಳು ಸಂಭವಿಸಿವೆ ಮತ್ತು 25 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ದಿನವೂ ಯಾತ್ರೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದಲ್ಲಿಹವಾಮಾನ ವೈಪರೀತ್ಯದಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಹೀಗಾಗಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರೆಗೆ ಅನುಕೂಲಕರ ವಾತಾವರಣವಿಲ್ಲದ ಕಾರಣ ಅಧಿಕಾರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.
ಹವಾಮಾನ ಸಹಜ ಸ್ಥಿತಿಗೆ ಮರಳಿದ ನಂತರ ಪ್ರವಾಸ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.