Government data;ದೇಶದಲ್ಲಿ ಕಳೆದ 5 ವರ್ಷಗಳಲ್ಲಿ 628 ಹುಲಿಗಳು ಸಾವು
ಹುಲಿ ದಾಳಿಗೆ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತೇ?!!
Team Udayavani, Jul 26, 2024, 5:49 PM IST
ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 628 ಹುಲಿಗಳು ನೈಸರ್ಗಿಕ ಕಾರಣಗಳು ಮತ್ತು ಬೇಟೆ ಸೇರಿದಂತೆ ಇತರ ಕಾರಣಗಳಿಂದ ಸಾವನ್ನಪ್ಪಿವೆ ಎಂದು ಸರಕಾರದ ಅಂಕಿಅಂಶಗಳು ತಿಳಿಸಿವೆ.
ಅವಧಿಯಲ್ಲಿ ಹುಲಿ ದಾಳಿಯಲ್ಲಿ 349 ಜನರು ಪ್ರಾಣಕಳೆದುಕೊಂಡಿದ್ದು ಮಹಾರಾಷ್ಟ್ರವೊಂದರಲ್ಲೇ ಅತ್ಯಧಿಕ 200 ಮಂದಿಯ ಸಾವು ದಾಖಲಾಗಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಪ್ರಕಾರ, 2019 ರಲ್ಲಿ 96, 2020 ರಲ್ಲಿ 106, 2021 ರಲ್ಲಿ 127, 2022 ರಲ್ಲಿ 121 ಮತ್ತು 2023 ರಲ್ಲಿ 178 ಹುಲಿಗಳು ಸಾವನ್ನಪ್ಪಿವೆ. 2023 ರಲ್ಲಿ ಅತೀ ಹೆಚ್ಚು ಹುಲಿಗಳು ಸಾವನ್ನಪ್ಪಿವೆ ಎಂದು ಅಂಕಿ ಅಂಶಗಳು ಬಹಿರಂಗ ಪಡಿಸಿವೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪರಿಸರ ಖಾತೆಯ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ‘2019 ಮತ್ತು 2020 ರಲ್ಲಿ 49, 2021 ರಲ್ಲಿ59 ,2022 ರಲ್ಲಿ110, 2023 ರಲ್ಲಿ 82 ಮಂದಿ ಹುಲಿ ದಾಳಿಗೆ ಬಲಿಯಾಗಿದ್ದಾರೆ ಎಂದು ವಿವರ ನೀಡಿದ್ದಾರೆ. ಉತ್ತರಪ್ರದೇಶದಲ್ಲಿ 59 ಮಂದಿ,ಮಧ್ಯಪ್ರದೇಶದಲ್ಲಿ 27 ಮಂದಿ ಹುಲಿಗಳ ದಾಳಿಗೆ ಬಲಿಯಾಗಿದ್ದಾರೆ.
2022 ರಲ್ಲಿ ಜಾಗತಿಕ ಹುಲಿಗಳ 75ಶೇಕಡಾ ಅಂದರೆ 3,682 ಹುಲಿಗಳು ಭಾರತದಲ್ಲಿ ಇರುವುದು ಸರಕಾರಿ ಅಂಕಿ ಅಂಶಗಳಿಂದ ತಿಳಿದು ಬಂದಿತ್ತು.
1973 ಏಪ್ರಿಲ್ 1 ರಂದು ಭಾರತ ಹುಲಿ ಯೋಜನೆ (Project Tiger) ಘೋಷಿಸಿತ್ತು. ಹುಲಿ ಸಂರಕ್ಷಣೆಯನ್ನು ಉತ್ತೇಜಿಸಿ ಆರಂಭದಲ್ಲಿ, ಇದು 18,278 ಚದರ ಕಿಲೋಮೀಟರ್ಗಳಷ್ಟು ವ್ಯಾಪಿಸಿರುವ ಒಂಬತ್ತು ಹುಲಿ ಸಂರಕ್ಷಿತ ಪ್ರದೇಶಗಳನ್ನು ಸಮೀಕ್ಷೆ ಕೈಗೊಳ್ಳಲಾಗಿತ್ತು. ಪ್ರಸ್ತುತ, ಭಾರತವು 78,735 ಚದರ ಕಿಲೋಮೀಟರ್ಗಳಿಗಿಂತ ಹೆಚ್ಚು 55 ಹುಲಿ ಸಂರಕ್ಷಿತ ಪ್ರದೇಶಗಳನ್ನು ಹೊಂದಿದೆ. ದೇಶದ ಭೌಗೋಳಿಕ ಪ್ರದೇಶದ ಸುಮಾರು 2.4 ಪ್ರತಿಶತ ಪ್ರದೇಶ ಹುಲಿಗಳ ಆವಾಸಸ್ಥಾನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.