Zika Virus: ಪುಣೆಯಲ್ಲಿ 66 ಝಿಕಾ ಸೋಂಕು ಪ್ರಕರಣ ದೃಢ… ಸೋಂಕಿತರಲ್ಲಿ 26 ಗರ್ಭಿಣಿಯರು


Team Udayavani, Aug 7, 2024, 3:57 PM IST

Zika Virus: ಪುಣೆಯಲ್ಲಿ 66 ಝಿಕಾ ಸೋಂಕು ಪ್ರಕರಣ… ಸೋಂಕಿತರಲ್ಲಿ 26 ಗರ್ಭಿಣಿಯರು

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 66 ಮಂದಿಯಲ್ಲಿ ಝಿಕಾ ವೈರಸ್ ಇರುವುದು ದೃಢಪಟ್ಟಿದೆ. ಇದುವರೆಗೆ ನಾಲ್ವರು ರೋಗಿಗಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತ ನಾಲ್ವರು ಅರವತ್ತೆಂಟರಿಂದ ಎಂಭತ್ತರ ನಡುವಿನ ವಯಸ್ಸಿನವರಾಗಿದ್ದು ಪ್ರಮುಖ ವಿಷಯವೆಂದರೆ ಮೃತಪಟ್ಟ ನಾಲ್ವರು ಕೇವಲ ಝಿಕಾ ಸೋಂಕಿನಿಂದ ಮೃತಪಟ್ಟಿಲ್ಲ ಬದಲಾಗಿ ವಯೋಸಹಜ ಕಾಯಿಲೆಯಿಂದ ನಾಲ್ವರು ಬಳಲುತ್ತಿದ್ದುದಾಗಿ ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಸದ್ಯ 66 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಅದರಲ್ಲಿ 26 ಮಂದಿ ಗರ್ಭಿಣಿಯಾರೂ ಸೇರಿದ್ದಾರೆ ಎನ್ನಲಾಗಿದೆ, ಅವರನ್ನು ಹೆಚ್ಚಿನ ನಿಗಾದಲ್ಲಿ ಇರಿಸಲಾಗಿದೆ ಜೊತೆಗೆ ಉಳಿದ ರೋಗಿಗಳು ಗುಣಮುಖರಾಗುತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜೊತೆಗೆ ರೋಗ ಹರಡುವ ಹಿನ್ನೆಲೆಯಲ್ಲಿ ಪುಣೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಏನಿದು ಝಿಕಾ ವೈರಸ್ ?
ಝಿಕಾ ವೈರಸ್ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾವನ್ನು ಹರಡುವ ಅದೇ ಈಡಿಸ್ ಜಾತಿಯ ಸೊಳ್ಳೆಯಿಂದ ಹರಡುವ ರೋಗವಾಗಿದೆ. 1947 ರಲ್ಲಿ ಉಗಾಂಡಾದ ಕೋತಿಗಳಲ್ಲಿ ಝಿಕಾ ವೈರಸ್ ಅನ್ನು ಮೊದಲು ಪತ್ತೆಹಚ್ಚಲಾಗಿತ್ತು. ಆದರೆ ಇದು ಆಫ್ರಿಕಾ, ಏಷ್ಯಾ, ಪೆಸಿಫಿಕ್ ದ್ವೀಪಗಳು ಮತ್ತು ದಕ್ಷಿಣ ಮತ್ತು ಮಧ್ಯ ಅಮೆರಿಕದ ಜನರ ಮೇಲೆ ಪರಿಣಾಮ ಬೀರುತಿತ್ತು.

ಲಕ್ಷಣಗಳು:
ಜ್ವರ, ದೇಹದ ಮೇಲೆ ಕೆಂಪು ಕಲೆಗಳು, ತಲೆನೋವು, ವಾಂತಿ ಮತ್ತು ಸಂಧಿವಾತ. ರೋಗಕಾರಕವು ದೇಹಕ್ಕೆ ಪ್ರವೇಶಿಸಿದ ನಂತರ ಮೂರನೇ ದಿನದಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳಬಹುದು. ಗರ್ಭಿಣಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೋಂಕಿಗೆ ಒಳಗಾಗುತ್ತಾರೆ. ಝಿಕಾ ವೈರಸ್ ಮಕ್ಕಳು ಮತ್ತು ವಯಸ್ಕರಲ್ಲಿ ನರದ ಸಮಸ್ಯೆಗಳಿಗೆ ಕಾರಣವಾಗಬಹುದು. ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡಿದರೆ ಜೀವಕ್ಕೆ ಯಾವುದೇ ಅಪಾಯವಿಲ್ಲ.

ಮುಂಜಾಗ್ರತ ಕ್ರಮ
ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಬೇಕು. ಮನೆ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛತೆ ಕಾಪಾಡುವುದು, ನೀರು ಸಂಗ್ರಹಣ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು. ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.