![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 24, 2023, 11:11 AM IST
ಲಕ್ನೋ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಾಲಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಬಿಲಾರಿ ಪ್ರದೇಶದಲ್ಲಿ ಭಾನುವಾರ ನಡೆದಿರುವುದು ವರದಿಯಾಗಿದೆ.
ಸವೇಂದ್ರ ಕುಮಾರ್ (7) ಮೃತ ಬಾಲಕ. ಬಾಲಕ ಸವೇಂದ್ರ ಕುಮಾರ್ ತನ್ನ ಅಕ್ಕನೊಂದಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆ ಮತ್ತು ತಾಯಿಗೆ ಚಹಾ ನೀಡಲು ಹೋಗಿದ್ದಾಗ ಈ ಘಟನೆ ನಡೆದಿದೆ.
ಬೀದಿ ನಾಯಿಗಳು ಏಕಾಏಕಿ ಬಂದು ಬಾಲಕನ ಮೇಲೆ ಎರಗಿದೆ. ಈ ವೇಳೆ ಬಾಲಕನ ಅಕ್ಕ ಕಿರುಚಾಡಿ ಅಕ್ಕಪಕ್ಕದವರ ಸಹಾಯ ಕೇಳಿದ್ದಾರೆ. ಸ್ಥಳೀಯರು ಕೋಲು, ಕಲ್ಲುಗಳಿಂದ ಬೀದಿ ನಾಯಿಗಳ ಗುಂಪನ್ನು ಓಡಿಸಲು ಯತ್ನಿಸಿದ್ದಾರೆ. ಬೀದಿ ನಾಯಿಗಳ ದಾಳಿಯಿಂದ ಗಂಭೀರ ಸ್ವರೂಪದಿಂದ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ತೀವ್ರ ಗಾಯಗೊಂಡಿದ್ದ ಬಾಲಕ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ನಾಗಠಾಣ ಬಿಜೆಪಿ ಬಂಡಾಯ ಶಮನ: ನಾಮಪತ್ರ ಹಿಂಪಡೆಯುವುದಾಗಿ ಮಹೇಂದ್ರ ನಾಯಿಕ್ ಘೋಷಣೆ
ಸ್ಥಳೀಯ ನಿವಾಸಿಗಳೊಂದಿಗೆ ಕುಟುಂಬಸ್ಥರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಎಸ್ಪಿ ಶಾಸಕ ಫಹೀಂ ಇರ್ಫಾನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಾಲಕನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.