Bharatpur; ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ 7 ಯುವಕರು ನೀರು ಪಾಲು
Team Udayavani, Aug 11, 2024, 5:57 PM IST
ಜೈಪುರ: ರಾಜಸ್ಥಾನದ ಭರತ್ಪುರದಲ್ಲಿ ಭಾನುವಾರ(ಆಗಸ್ಟ್11) ನದಿಯಲ್ಲಿ ಸ್ನಾನ ಮಾಡುತ್ತಿದ್ದ ಏಳು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶ್ರೀನಗರ ಗ್ರಾಮದ ಮೂವರು ಸೋದರ ಸಂಬಂಧಿಗಳು ಸೇರಿದಂತೆ ಎಂಟು ಯುವಕರು ಬಂಗಂಗಾ ನದಿಗೆ ಸ್ನಾನ ಮಾಡಲು ಹೋಗಿದ್ದರು.
”ಒಬ್ಬರ ನಂತರ ಒಬ್ಬರು ಆಳವಾದ ನೀರಿನ ಗುಂಡಿಗೆ ಜಾರಿಬಿದ್ದು ಮುಳುಗಿ ಸಾವನ್ನಪ್ಪಿದ್ದಾರೆ.ಒಬ್ಬ ಮಾತ್ರ ಪಾರಾಗಿ ಗ್ರಾಮಕ್ಕೆ ಬಂದು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ”ಎಂದು ಬಯಾನಾ ಸದರ್ ಎಸ್ಎಚ್ಒ ಬಲರಾಮ್ ಯಾದವ್ ಹೇಳಿದ್ದಾರೆ.
ಇದನ್ನೂ ಓದಿ: SUV ನದಿಯಲ್ಲಿ ಕೊಚ್ಚಿ ಹೋಗಿ ಒಂದೇ ಕುಟುಂಬದ 7 ಮಂದಿ ಸಾವು, ಮೂವರು ನಾಪತ್ತೆ
ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಶವಗಳನ್ನು ಹೊರತೆಗೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ದುರ್ದೈವಿ ಯುವಕರು ಪವನ್ ಸಿಂಗ್ ಜಾತವ್ (20), ಸೌರಭ್ ಜಾತವ್ (18), ಮತ್ತು ಗೌರವ್ ಜಾತವ್ (16) ಎಂದು ಗುರುತಿಸಲಾಗಿದ್ದು, ಮೂವರೂ ಸೋದರ ಸಂಬಂಧಿಗಳಾದ ಭೂಪೇಂದ್ರ ಜಾತವ್ (18), ಶಾಂತನು ಜಾತವ್ (18), ಲಖಿ ಜಾತವ್ (20) ಮತ್ತು ಪವನ್ ಜಾತವ್ (22) ಎನ್ನುವವರಾಗಿದ್ದಾರೆ.
ಮೃತ ಯುವಕರೆಲ್ಲರೂ ಸಂಬಂಧಿಕರಾಗಿದ್ದು, ಒಂದೇ ಗ್ರಾಮದವರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.